ಅಥಣಿ: ಸ್ಥಳೀಯ ಜೆಇ ಶಿಕ್ಷಣ ಸಂಸ್ಥೆಯ ಕೆ.ಎ. ಲೋಕಾಪುರ ಪದವಿ ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ವತಿಯಿಂದ ಮಾ.7ರಂದು ಬೆಳಗ್ಗೆ 10 ಗಂಟೆಗೆ ಆರ್.ಎಚ್. ಕುಲಕರ್ಣಿ ಸಭಾಭವನದಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಸಂಪನ್ಮೂಲ ವ್ಯಕ್ತಿಗಳು ರಸಾಯನ, ಭೌತ, ಗಣಿತ ಶಾಸ್ತ್ರಕ್ಕೆ ಸಂಬಂಧಿಸಿದ ವಿಷಯ ಮಂಡಿಸುವರು. ಇದರ ಮೇಲೆ ಚರ್ಚೆಗಳೂ ನಡೆಯಲಿದ್ದು ಆಸಕ್ತರು ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ. ದೇವರಡ್ಡಿ(ಮೊ.ಸಂ.-9972617671) ಹಾಗೂ ಕಾರ್ಯಕ್ರಮ ಸಂಯೋಜಕ ಡಾ. ಪ್ರಶಾಂತ ಮಗದುಮ(ಮೊ.ಸಂ.-9743030731) ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ
ಅಥಣಿ: ಸ್ಥಳೀಯ ಜೆಇ ಶಿಕ್ಷಣ ಸಂಸ್ಥೆಯ ಕೆಎ ಲೋಕಾಪುರ ಪದವಿ ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ವತಿಯಿಂದ ಮಾ7ರಂದು ಬೆಳಗ್ಗೆ 10 ಗಂಟೆಗೆ ಆರ್ಎಚ್...
Vijaya Karnataka 6 Mar 2019, 5:00 am