ಬೆಳಗಾವಿ: ಈ ಸಲದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕನ್ನಡದ ವಾತಾವರಣ ನಿರ್ಮಿಸುವ ಉದ್ದೇಶದಿಂದ ತಮ್ಮ ಸಂಘಟನೆಯಿಂದಲೂ ಅಭ್ಯರ್ಥಿಗಳು ಚುನಾವಣೆ ಎದುರಿಸಲಿದ್ದಾರೆ ಎಂದು ಕರ್ನಾಟಕ ನವ ನಿರ್ಮಾಣ ಸೇನೆ ರಾಜ್ಯಧ್ಯಕ್ಷ ಭೀಮಾಶಂಕರ ಪಾಟೀಲ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾಹಿತಿ ನೀಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ರಾಷ್ಟ್ರೀಯ ಪಕ್ಷಗಳ ರಾಜಕೀಯ ವ್ಯವಸ್ಥೆ ಹಾಳಾಗಿದೆ. ಜತೆಗೆ ಕನ್ನಡ ನಾಡು, ನುಡಿಯ ಕಳಕಳಿಯೂ ಮಾಯವಾಗುತ್ತಿದೆ. ಆದ್ದರಿಂದ, ಈ ಚುನಾವಣೆಯಲ್ಲಿ ಕನ್ನಡ ಬಗ್ಗೆ ಅಭಿಮಾನ ಹೊಂದಿರುವ ಅಭ್ಯರ್ಥಿಗಳನ್ನೇ ಮತದಾರರು ಆಯ್ಕೆ ಮಾಡಬೇಕು. ಅದರಲ್ಲೂ ಬೆಳಗಾವಿ ಗಡಿ ಪ್ರದೇಶದ ಕ್ಷೇತ್ರಗಳಲ್ಲಿ ಕನ್ನಡ ವಾತಾವರಣ ಮರುನಿರ್ಮಾಣಗೊಳಿಸಲು ಕನ್ನಡದ ಕಳಕಳಿ ಇರುವವರೇ ಆಯ್ಕೆಗೊಳ್ಳಬೇಕು. ಬೆಳಗಾವಿ ದಕ್ಷಿಣ ಮತ್ತು ಉತ್ತರ ಕ್ಷೇತ್ರಗಳಲ್ಲಿ ಕನ್ನಡದ ರಕ್ತ ಹರಿಯುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಟಿಕೆಟ್ ನೀಡಿ ಎಂಇಎಸ್ ದುರಾಡಳಿತಕ್ಕೆ ಅಂತ್ಯ ಹಾಡಬೇಕು ಎಂದರು. ಸಂಘಟನೆ ಜಿಲ್ಲಾಧÜ್ಯಕ್ಷ ಬಾಬು ಸಂಗೋಡಿ, ಮಂಜುನಾಥ್ ಪಾಟೀಲ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನವ ನಿರ್ಮಾಣ ಸೇನೆ ಸ್ಪರ್ಧೆ: ಭೀಮಾಶಂಕರ
ಈ ಸಲದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕನ್ನಡದ ವಾತಾವರಣ ನಿರ್ಮಿಸುವ ಉದ್ದೇಶದಿಂದ ತಮ್ಮ ಸಂಘಟನೆಯಿಂದಲೂ ಅಭ್ಯರ್ಥಿಗಳು ಚುನಾವಣೆ ಎದುರಿಸಲಿದ್ದಾರೆ ...
Vijaya Karnataka 15 Apr 2018, 5:00 am