ಆ್ಯಪ್ನಗರ

ಸಂಭವನೀಯ ಪ್ರವಾಹ ಎದುರಿಸಲು ಅಗತ್ಯ ಸಿದ್ಧತೆ

ಬೆಳಗಾವಿ: ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಹೆಚ್ಚಿನ ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರು ಬಿಡಲಾಗುತ್ತಿದೆ...

Vijaya Karnataka 12 Jul 2019, 5:00 am
ಬೆಳಗಾವಿ : ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಹೆಚ್ಚಿನ ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರು ಬಿಡಲಾಗುತ್ತಿದೆ. ಹೀಗಾಗಿ ಚಿಕ್ಕೋಡಿ ಭಾಗದಲ್ಲಿ ನದಿ ತುಂಬಿ ಹರಿಯುತ್ತಿವೆ. ನದಿ ದಡದ ಗ್ರಾಮಗಳಲ್ಲಿ ಯಾವುದೇ ರೀತಿ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್‌.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.
Vijaya Karnataka Web necessary preparation to deal with a probable flood
ಸಂಭವನೀಯ ಪ್ರವಾಹ ಎದುರಿಸಲು ಅಗತ್ಯ ಸಿದ್ಧತೆ


ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡೂರ ಗ್ರಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಸಂಭವನೀಯ ಪ್ರವಾಹ ಎದುರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಗ್ನಿ ಶಾಮಕ ಸಿಬ್ಬಂದಿ, ಕಂದಾಯ ಇಲಾಖೆ ಅಧಿಕಾರಿಗಳನ್ನು ನದಿ ತೀರದ ಗ್ರಾಮಗಳಲ್ಲಿ ನಿಯೋಜಿಸಲಾಗಿದೆ.

ಖಾನಾಪುರ ತಾಲೂಕಿನ ಕೆಲ ಗ್ರಾಮಗಳಲ್ಲಿ ಮಳೆಯಿಂದ ಸಮಸ್ಯೆಯಾಗಿದೆ. ಜಮೀನುಗಳಿಗೆ ಮಳೆ ನೀರು ನುಗ್ಗಿದೆ. ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ಕ್ರಮಕೈಗೊಂಡಿದ್ದಾರೆ. ಜಿಲ್ಲೆಯ ಅಥಣಿ, ರಾಯಬಾಗ ಮತ್ತು ರಾಮದುರ್ಗದಲ್ಲಿ ಇನ್ನೂ ಮಳೆ ಕೊರತೆಯಿದೆ ಎಂದು ಅವರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ