ಆ್ಯಪ್ನಗರ

ಸ್ಪರ್ಧೆಯಿಂದ ಹಿಂದೆ ಸರಿಯಲಾರೆ ಎಂದ ಬುಟಾಳಿ

ಅಥಣಿ: ''ಕಾಂಗ್ರೆಸ್‌ ಹೈಕಮಾಂಡ್‌ ನನಗೆ ಟಿಕೆಟ್‌ ನೀಡುವುದಾಗಿ ಭರವಸೆ ನೀಡಿ ಕೊನೆ ಗಳಿಗೆಯಲ್ಲಿನಿರಾಸೆ ಉಂಟು ಮಾಡಿದೆ...

Vijaya Karnataka Web 19 Nov 2019, 5:00 am
ಅಥಣಿ: ''ಕಾಂಗ್ರೆಸ್‌ ಹೈಕಮಾಂಡ್‌ ನನಗೆ ಟಿಕೆಟ್‌ ನೀಡುವುದಾಗಿ ಭರವಸೆ ನೀಡಿ ಕೊನೆ ಗಳಿಗೆಯಲ್ಲಿನಿರಾಸೆ ಉಂಟು ಮಾಡಿದೆ. ಆದ್ದರಿಂದ ನನ್ನ ಕಾರ್ಯಕರ್ತರ ಒತ್ತಾಸೆಯಿಂದ ನಾವೆಲ್ಲಸಹೋದರರು ಒಂದಾಗಿ ಚುನಾವಣೆ ಎದುರಿಸುತ್ತೇವೆ. ಯಾವ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ'' ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಸದಾಶಿವ ಬುಟಾಳೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಈ ಹಿಂದೆ ಜೆಡಿಎಸ್‌ನಿಂದ ಮೂರು ಬಾರಿ ಸ್ಪರ್ಧಿಸಿದ್ದೇನೆ. ಜನರೊಂದಿಗೆ ಸಂಪರ್ಕ ಹೊಂದಿದ್ದು ಗೆಲುವು ನನ್ನದೇ ಎಂಬ ಆತ್ಮವಿಶ್ವಾಸವಿದೆ'' ಎಂದರು. ಬಸವರಾಜ ಬುಟಾಳೆ, ಸುಭಾಷ ಪಾಟಣಕರ, ರೇವಣಸಿದ್ದಪ್ಪ ಖ್ಯಾಡಿ, ಮಲ್ಲಿಕಾರ್ಜುನ ಬುಟಾಳೆ, ಭರತ ಲೋನಾರಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
Vijaya Karnataka Web 18ATHANI 6081214
ಸದಾಶಿವ ಬುಟಾಳೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ