ಆ್ಯಪ್ನಗರ

ಮಹಾರಾಷ್ಟ್ರದಲ್ಲಿ ‌ಹೊಸ ಸರಕಾರ ನಿಶ್ಚಿತ: ಸಚಿವ ಮುರುಗೇಶ ನಿರಾಣಿ

ಶಿವಸೇನೆಯವರು ಕಳೆದ 50 ವರ್ಷಗಳಿಂದ ಕಾಂಗ್ರೆಸ್, ಎನ್‍ಸಿಪಿಯನ್ನು ವಿರೋಧ ಮಾಡಿಕೊಂಡು ಬಂದಿದ್ದಾರೆ. ಈಗ ಏಕಾಏಕಿ ಹೊಂದಾಣಿಕೆ ಮಾಡಿಕೊಂಡು ರಾಜಕಾರಣ ನಡೆಸುವುದನ್ನು ಕಾರ್ಯಕರ್ತರು ಒಪ್ಪುವುದಿಲ್ಲ.

Lipi 28 Jun 2022, 10:59 am
ಬೆಳಗಾವಿ: ಶಿವಸೇನೆ ಮತ್ತು ಬಿಜೆಪಿ ಹೊಂದಾಣಿಕೆ ಹೊಸದಲ್ಲ. ಹಳೆಯ ಸಂಬಂಧವಾಗಿದ್ದು, ಸ್ವಲ್ಪ ಹೊಂದಾಣಿಕೆ ಕೊರತೆಯಿಂದ ದೂರ ಹೋಗಿರಬಹುದು. ಈಗ ಮತ್ತೆ ಒಂದಾಗಲಿದ್ದು, ನಿಶ್ಚಿತವಾಗಿ‌ ಮಹಾರಾಷ್ಟ್ರದಲ್ಲಿ ಹೊಸ ಸರಕಾರ ರಚನೆ ಆಗಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Vijaya Karnataka Web ಮುರುಗೇಶ್‌ ನಿರಾಣಿ
ಮುರುಗೇಶ್‌ ನಿರಾಣಿ


ಬೆಳಗಾವಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್‍ಸಿಪಿ, ಕಾಂಗ್ರೆಸ್, ಶಿವಸೇನೆ ಮೂರು ಸೇರಿ ಯಾವಾಗ ಸರ್ಕಾರ ಸ್ಥಾಪಿಸಿದ್ದಾರೆ. ಆಗಲೇ ಈ ಸರಕಾರ ಬಹಳ ದಿನ ನಡೆಯಲ್ಲ ಎಂದು ನಾವು ತಿಳಿದುಕೊಂಡಿದ್ದೆವು. ತಮ್ಮ ತಮ್ಮಲ್ಲಿಯೇ ಗೊಂದಲ ಮೂಡಿದೆ. ಒಂದು ವಾಹನ ಆರಂಭಿಸುವಾಗ ಪೂರ್ತಿ ಸ್ಟೇರಿಂಗ್ ಒಬ್ಬರ ಕಡೆ ಇರಬೇಕು. ಒಬ್ಬರ ಕಡೆ ಸ್ಟೇರಿಂಗ್, ಒಬ್ಬರ ಕಡೆ ಎಕ್ಸಿಲೇಟರ್, ಒಬ್ಬರ ಕಡೆ ಬ್ರೇಕ್ ಇರುವಾಗ ಅದು ಸುಸೂತ್ರವಾಗಿ ನಡೆಯೋದಿಲ್ಲ ಎಂದು ನಮಗೆ ಮೊದಲೇ ಗೊತ್ತಿತ್ತು ಎಂದರು.

'ಮಹಾ' ಬಿಕ್ಕಟ್ಟಿಗೆ ಬಿಜೆಪಿ ಹೊಣೆಯಲ್ಲ: ಮುರುಗೇಶ್ ನಿರಾಣಿ ಸ್ಪಷ್ಟನೆ

ಶಿವಸೇನೆಯವರು ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಮತ್ತು ಎನ್‍ಸಿಪಿಯನ್ನು ವಿರೋಧ ಮಾಡಿಕೊಂಡು ಬಂದಿದ್ದಾರೆ. ಇಷ್ಟು ದಿನ ವಿರೋಧ ಮಾಡಿಕೊಂಡು ಈಗ ಏಕಾಏಕಿ ಅವರ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ರಾಜಕಾರಣ ನಡೆಸುವುದನ್ನು ಕಾರ್ಯಕರ್ತರು ಒಪ್ಪುವುದಿಲ್ಲ. ಇದರಿಂದ ಅಸಮಾಧಾನಗೊಂಡು ಹೊರಗಡೆ ಬರುತ್ತಿದ್ದಾರೆ.

ಎಲ್ಲ ಕಾನೂನುಗಳ ಸಾಧಕ-ಬಾಧಕಗಳನ್ನು ವಿಚಾರ ಮಾಡಿಕೊಂಡು ಅವರು ಭೇಟಿಯಾಗಬಹುದು. ನಿಶ್ಚಿತವಾಗಿ ಮಹಾರಾಷ್ಟ್ರದಲ್ಲಿ ಒಂದು ಹೊಸ ಸರ್ಕಾರ ಸ್ಥಾಪನೆ ಆಗುತ್ತದೆ ಎಂದು ಹೇಳಿದರು.

ಗುಡಿಸಲು ಮುಕ್ತ ರಾಜ್ಯವಾಗಿಸಲು ಶ್ರಮ

ಬೆಳಗಾವಿ: ಕೊಳಗೇರಿ ಮತ್ತು ಗುಡಿಸಲುಗಳಲ್ಲಿವಾಸಿಸುವ ಬಡಜನರ ಜೀವನ ಸುಧಾರಿಸಲು ಪ್ರಧಾನಮಂತ್ರಿ ವಾಜಪೇಯಿ ಆವಾಸ್‌ ಯೋಜನೆ ಜಾರಿಗೆ ತಂದಿದ್ದು, ಗುಡಿಸಲು ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದು ಬಿಜೆಪಿ ಸರಕಾರದ ಗುರಿಯಾಗಿದೆ ಎಂದು ಶಾಸಕ ಅಭಯ್‌ ಪಾಟೀಲ ಹೇಳಿದರು.

ಮಹಾರಾಷ್ಟ್ರದಲ್ಲಿರುವುದು ಮೂರಾಬಟ್ಟೆ ಸರ್ಕಾರ ಎಂದು ಲೇವಡಿ ಮಾಡಿದ ಗೋವಿಂದ ಕಾರಜೋಳ!

ಇಲ್ಲಿನ ಉದ್ಯಮಬಾಗದಲ್ಲಿಸೋಮವಾರ ವಾಜಪೇಯಿ ನಗರ ವಸತಿ ಆವಾಸ್‌ ಯೋಜನೆಯಡಿ ಮನೆಗಳ ನಿರ್ಮಾಣ ಕಾಮಗಾರಿಗೆ ಅಡಿಗಲ್ಲುಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕೊರೊನಾ ವೇಳೆ ಸ್ಲಂ ಜನರ ಪರಿಸ್ಥಿತಿ ನೋಡಲಾರದೆ ಅವರಿಗೆ ಗುಣಮಟ್ಟದ ಬದುಕು ಕಟ್ಟಿಕೊಡುವ ಉದ್ದೇಶದಿಂದ ಮೂರು ಮಹಲುಗಳಲ್ಲಿಒಟ್ಟು 250 ಮನೆಗಳನ್ನು ಆವಾಸ್‌ ಯೋಜನೆಯಡಿ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ