ಆ್ಯಪ್ನಗರ

ರಕ್ಷಣೆ ಕೋರಿ ಎಸ್ಪಿ ಮೊರೆ ಹೋದ ನವ ಜೋಡಿ

ಬೆಳಗಾವಿ: ಕುಟುಂಬದ ಸದಸ್ಯರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಮದುವೆಯಾಗಿ ಮರಳಿ ಬಂದಿರುವ ನವ ಜೋಡಿಯೊಂದು ಈಗ ...

Vijaya Karnataka 28 Jun 2018, 5:00 am
ಬೆಳಗಾವಿ: ಕುಟುಂಬದ ಸದಸ್ಯರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಮದುವೆಯಾಗಿ ಮರಳಿ ಬಂದಿರುವ ನವ ಜೋಡಿಯೊಂದು ಈಗ ರಕ್ಷಣೆ ಕೋರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಮೆಟ್ಟಿಲೇರಿದೆ.
Vijaya Karnataka Web BLG-2706-2-52-27MAHESH3


ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದ ಸಂದೀಪ ಕರೆಪ್ಪಗೋಳ ಹಾಗೂ ಗೌರಿ ಪಾಟೀಲ ಕುಟುಂಬದವರ ವಿರೋಧವಿದ್ದ ಕಾರಣ ಮನೆ ಬಿಟ್ಟು ಬೆಂಗಳೂರಿಗೆ ಹೋಗಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಈಗ ಮರಳಿ ಮನೆಗೆ ಬಂದಿದ್ದೇವಾದರೂ ಹುಡುಗಿ ಮನೆಯವರು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಸಂದೀಪ, ನಮಗೂ ನಮ್ಮ ಕುಟುಂಬಕ್ಕೂ ರಕ್ಷಣೆ ಬೇಕೆಂದು ಎಸ್‌ಪಿ ಸುಧೀರಕುಮಾರ ರೆಡ್ಡಿ ಅವರನ್ನು ಭೇಟಿ ಮಾಡಿ ಬುಧವಾರ ಮನವಿ ಮಾಡಿದರು.

ಸಂದೀಪ-ಗೌರಿ ಇಬ್ಬರೂ ಜೂ.23ರಂದು ಮನೆ ಬಿಟ್ಟು ಬೆಂಗಳೂರಿಗೆ ಹೋಗಿದ್ದರು. ಹೀಗಾಗಿ, ಗೌರಿಯ ಸಹೋದರ ಅಣ್ಣಾಸಾಹೇಬ್‌ ಪಾಟೀಲ ಸಹೋದರಿಯನ್ನು ಅಪಹರಿಸಲಾಗಿದೆ ಎಂದು ಐಗಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಸಂದೀಪನ ಸಹೋದರ ಪ್ರದೀಪನನ್ನು ಪೊಲೀಸರು ಬಂಧಿಸಿದ್ದರು. ಇದರಿಂದ ಬೇಸತ್ತ ಜೋಡಿ ಎಸ್ಪಿಗೆ ದೂರು ನೀಡಿದ್ದಾರೆ. ಎಸ್ಪಿ ಕೂಡ ಪೊಲೀಸ್‌ ಭದ್ರತೆ ನೀಡುವ ಭರವಸೆ ಕೊಟ್ಟಿದ್ದಾರೆ.

ನಾವು ಪ್ರೀತಿಸಿ ಮದುವೆಯಾಗಿದ್ದೇವೆ. ನನ್ನನ್ನು ಯಾರೂ ಅಪಹರಿಸಿಲ್ಲ. ಯಾರೂ ವಿನಾಕಾರಣ ನನ್ನ ಪತಿಯ ಕುಟುಂಬಕ್ಕೆ ಕಿರುಕುಳ ನೀಡಬಾರದು.
- ಗೌರಿ ಪಾಟೀಲ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ