ರಾಮದುರ್ಗ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ನಿರ್ಮಾಣದ ಹೋರಾಟವನ್ನು ಕರವೇ (ಪ್ರವೀಣ ಶೆಟ್ಟಿ ಬಣ) ತಾಲೂಕು ಘಟಕವು ವಿರೋಧಿಸುತ್ತದೆ. ಆ. 2ರಂದು ಕರೆದಿರುವ ಉತ್ತರ ಕರ್ನಾಟಕ ಬಂದ್ಗೆ ಬೆಂಬಲಿಸುವುದಿಲ್ಲವೆಂದು ಕರವೇ ತಾಲೂಕಾಧ್ಯಕ್ಷ ದುಂಡಯ್ಯ ಹಿರೇಮಠ ತಿಳಿಸಿದ್ದಾರೆ. ಉತ್ತರ ಕರ್ನಾಟಕದ ಜನಪ್ರತಿನಿಧಿಗಳು ಅಭಿವೃದ್ಧಿಗಾಗಿ ಸದನದಲ್ಲಿ ಹೋರಾಟ ಮಾಡದೇ ಕೇವಲ ಪ್ರತ್ಯೇಕತೆ ಮಾತು ಮಾತನಾಡುವುದು ಸರಿಯಾದ ಕ್ರಮವಲ್ಲ. ಇವರು ಈ ಭಾಗದ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆಗೆ ಸರಕಾರವನ್ನು ಒತ್ತಾಯಿಸಬೇಕು. ಬಿಡುಗಡೆಗೊಂಡ ಅನುದಾನ ಸದ್ಭಳಕೆಯಾಗುವಂತೆ ಸೂಕ್ತ ಯೋಜನೆ ಹಾಕಿಕೊಳ್ಳಬೇಕು. ಈ ಭಾಗದ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದೇ ಹೋದಲ್ಲಿ ಕರವೇ ನೇತೃತ್ವದಲ್ಲಿ ರಾಜ್ಯಾದ್ಯಂತ ಉತ್ತರ ಕರ್ನಾಟಕದ ಜನಪ್ರತಿನಿಧಿಗಳ ವಿರುದ್ಧವೇ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಬಂದ್ಗೆ ಬೆಂಬಲ ಇಲ್ಲ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ನಿರ್ಮಾಣದ ಹೋರಾಟವನ್ನು ಕರವೇ (ಪ್ರವೀಣ ಶೆಟ್ಟಿ ಬಣ) ತಾಲೂಕು ಘಟಕವು ವಿರೋಧಿಸುತ್ತದೆ ಆ...
Vijaya Karnataka 2 Aug 2018, 5:00 am