ಆ್ಯಪ್ನಗರ

‘ಲಕ್ಷ್ಮಿ ಹೆಬ್ಬಾಳಕರ್‌ ಮಾತು ಅವರ ಯೋಗ್ಯತೆಗೆ ತಕ್ಕುದಲ್ಲ’

ಬೈಲಹೊಂಗಲ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರಚಾರಕ್ಕಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ...

Vijaya Karnataka 31 Aug 2019, 5:00 am
ಬೈಲಹೊಂಗಲ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರಚಾರಕ್ಕಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
Vijaya Karnataka Web not worthy of lakshmi hebbalkars speech
‘ಲಕ್ಷ್ಮಿ ಹೆಬ್ಬಾಳಕರ್‌ ಮಾತು ಅವರ ಯೋಗ್ಯತೆಗೆ ತಕ್ಕುದಲ್ಲ’


ತಾಲೂಕಿನ ಇಂಚಲದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ''ಲಕ್ಷ್ಮಿ ಹೆಬ್ಬಾಳಕರ ಭಿಕ್ಷೆ ಬೇಡಿ ನಿರಾಶ್ರಿತರಿಗೆ ಮನೆ ಕಟ್ಟಿಸಿ ಕೊಡುವುದಾಗಿ ಹೇಳಿದ್ದಾರೆ. ಅವರಿಗೆ ಮಾಹಿತಿ ಕೊರತೆ ಇರಬಹುದು. ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಯಾವ ರೀತಿ ಹಣ ನೀಡುತ್ತೇವೆ ಎಂಬುದರ ಕುರಿತು ನಾನು ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ'', ಎಂದರು.

''ಸೊಸೈಟಿಯವರು ಸಾಲ ಕೇಳಿದರೆ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳಿ ಎಂದು ಒಬ್ಬ ಶಾಸಕಿಯಾಗಿ ಹೇಳುವುದು ಅವರ ಯೋಗ್ಯತೆಗೆ ಸರಿಯಲ್ಲ'', ಎಂದ ಲಕ್ಷ್ಮಣ ಸವದಿ, ''ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದೀರಿ, ಈ ರೀತಿ ಹೇಳಿಕೆ ಕೊಡುವಾಗ ಆಲೋಚನೆ ಮಾಡಬೇಕು. ಜನರನ್ನು ಪ್ರಚೋದಿಸಬಾರದು'', ಎಂದು ಕಿವಿಮಾತು ಹೇಳಿದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಉಸ್ತುವಾರಿ ಕುರಿತು ಸವದಿ ಅವರನ್ನು ಪ್ರಶ್ನಿಸಿದಾಗ, ''ರಾಜ್ಯದಿಂದ ಮುಖಂಡರನ್ನು ಕರೆದುಕೊಂಡು ಹೋಗಿ ಅಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇನೆ. ದೇವೇಂದ್ರ ಫಡ್ನವೀಸರನ್ನು ಪುನಃ ಮುಖ್ಯಮಂತ್ರಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ'', ಎಂದರು. ಡಿಕೆಶಿ ಇಡಿ ಪ್ರಕರಣ ಕುರಿತು ಡಿಸಿಎಂ ಸವದಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ