ಆ್ಯಪ್ನಗರ

ತಂಬಾಕು ಉತ್ಪನ್ನ ಮಾರಾಟ ಪತ್ತೆಗೆ ರಹಸ್ಯ ಕಾರಾರ‍ಯಚರಣೆಗೆ ಸೂಚನೆ

ಬೆಳಗಾವಿ: ಮಕ್ಕಳು ಮತ್ತು ಯುವ ಜನತೆ ...

Vijaya Karnataka 5 Jan 2020, 5:00 am
ಬೆಳಗಾವಿ: ಮಕ್ಕಳು ಮತ್ತು ಯುವ ಜನತೆ ದುಶ್ಚಟಗಳಿಗೆ ಬಲಿಯಾಗದಂತೆ ತಡೆಯಲು 'ಕæೂೕಟ್ಪಾ-2003' ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಈ ನಿಟ್ಟಿನಲ್ಲಿನಾನಾ ಇಲಾಖೆಗಳ ಅಧಿಕಾರಿಗಳ ಪಾತ್ರ ಮಹತ್ವದ್ದು ಎಂದು ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಹೇಳಿದರು.
Vijaya Karnataka Web notice of detection of tobacco product disclosure
ತಂಬಾಕು ಉತ್ಪನ್ನ ಮಾರಾಟ ಪತ್ತೆಗೆ ರಹಸ್ಯ ಕಾರಾರ‍ಯಚರಣೆಗೆ ಸೂಚನೆ


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಶನಿವಾರ ಆಯೋಜಿಸಿದ್ದ ಜಿಲ್ಲಾತಂಬಾಕು ನಿಯಂತ್ರಣ ಕೋಶದ ಜಿಲ್ಲಾಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಕ್ಷಣ ಸಂಸ್ಥೆಗಳ 100 ಮಿ. ವ್ಯಾಪ್ತಿಯಲ್ಲಿತಂಬಾಕು ಉತ್ಪನ್ನ ಮಾರಾಟ ಮಾಡದಂತೆ ಕ್ರಮ ವಹಿಸಬೇಕು. ಎಚ್ಚರಿಕೆ ನಾಮಫಲಕಗಳನ್ನು ಕಡ್ಡಾಯವಾಗಿ ಶಿಕ್ಷಣ ಸಂಸ್ಥೆಗಳ ಮುಖ್ಯದ್ವಾರದ ಮುಂಭಾಗದಲ್ಲಿಪ್ರದರ್ಶಿಸಬೇಕು. ಜಿಲ್ಲೆಯ ಶಿಕ್ಷಣ ಸಂಸ್ಥೆಗಳು ತಂಬಾಕು ಮುಕ್ತವೆಂದು ಘೋಷಿಸಲು ಕ್ರಮವಹಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಲೂಕಿನ ಎಲ್ಲಸರಕಾರಿ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿ ಮಾಡುವ ನಿಟ್ಟಿನಲ್ಲಿಜಿಲ್ಲೆಯ ಎಲ್ಲತಾಲೂಕು ಆರೋಗ್ಯಾಧಿಕಾರಿಗಳು ಕ್ರಮ ಜರುಗಿಸಬೇಕು. ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವ ಸ್ಥಳಗಳಲ್ಲಿಒಂದು ವಾರ ನಿರಂತರವಾಗಿ ರಹಸ್ಯ ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾಸರ್ವೇಕ್ಷಣಾ ತಂಬಾಕು ನಿಯಂತ್ರಣ ಅಧಿಕಾರಿ ಡಾ. ಬಿನ್‌.ಎನ್‌. ತುಕ್ಕಾರ, ಕೈಗೊಂಡಿರುವ ಕಾರ್ಯಾಚರಣೆ ಬಗ್ಗೆ ತಿಳಿಸಿದರು.

ಮಂಗನ ಕಾಯಿಲೆ: ಮಂಗನ ಕಾಯಿಲೆ ಕುರಿತು ಮುನ್ನೆಚ್ಚರಿಕೆ ವಹಿಸಬೇಕು. ಶಿಕ್ಷಣ ಇಲಾಖೆ, ಪಶುಸಂಗೋಪನಾ ಇಲಾಖೆ, ಅರಣ್ಯ ಇಲಾಖೆ ಹೆಚ್ಚಿನ ಗಮನ ಹರಿಸಬೇಕು. ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜನ ಜಾಗೃತಿ ಮೂಡಿಸಬೇಕು. ಮಂಗಗಳ ಸಾವು ಕಂಡು ಬಂದಲ್ಲಿಆರೋಗ್ಯ ಇಲಾಖೆಗೆ ತಿಳಿಸಬೇಕು. ವಿಶೇಷವಾಗಿ ಖಾನಾಪುರ ತಾಲೂಕಿನಲ್ಲಿನಿಗಾ ವಹಿಸಬೇಕು ಎಂದರು.

ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್‌.ವಿ.ಮುನ್ಯಾಳ, ಆರ್‌.ಸಿ.ಎಚ್‌. ಅಧಿಕಾರಿ ಡಾ. ಐ.ಪಿ. ಗಡಾದ ಮತ್ತು ಇತರರು ಸಭೆಯಲ್ಲಿಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ