ಆ್ಯಪ್ನಗರ

ಪಾನ್‌ ಶಾಪ್‌ಗಳ ಮೇಲೆ ದಾಳಿ ನಡೆಸಿ ತಂಬಾಕು ಉತ್ಪನ್ನ ವಶ

ಅಥಣಿ : ಜಿಲ್ಲಾ ತಂಬಾಕು ನಿಯಂತ್ರಣ ಕೋಶಾಧಿಕಾರಿಗಳು, ವೈದ್ಯಕೀಯ ಮತ್ತು ಪೊಲೀಸ ಇಲಾಖೆ ಸಹಯೋಗದಲ್ಲಿ ಬುಧವಾರ ಸಂಜೆ ಪಟ್ಟಣದಲ್ಲಿ ತಂಬಾಕು ಮಾರಾಟ ಮಾಡುವ ಅಂಗಡಿಗಳ ...

Vijaya Karnataka 8 Feb 2019, 5:00 am
ಅಥಣಿ : ಜಿಲ್ಲಾ ತಂಬಾಕು ನಿಯಂತ್ರಣ ಕೋಶಾಧಿಕಾರಿಗಳು, ವೈದ್ಯಕೀಯ ಮತ್ತು ಪೊಲೀಸ ಇಲಾಖೆ ಸಹಯೋಗದಲ್ಲಿ ಬುಧವಾರ ಸಂಜೆ ಪಟ್ಟಣದಲ್ಲಿ ತಂಬಾಕು ಮಾರಾಟ ಮಾಡುವ ಅಂಗಡಿಗಳ ಮೇಲೆ ಧಿಡೀರ್‌ ದಾಳಿ ನಡೆಸಿ ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Vijaya Karnataka Web BEL-07 ATHANI-02


ಪಟ್ಟಣದ ಶಾಲಾ ಕಾಲೇಜು ಸುತ್ತಮುತ್ತಲು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು. ಇವು ಶಾಲಾ ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಇಂತಹ ಉತ್ಪನ್ನಗಳನ್ನು ಮಾರಾಟ ಮಾಡುವುದು ಕಂಡು ಬಂದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಶಾಲೆಯ ಸುತ್ತಲೂ ಇರುವ ಅಂಗಡಿಗಳಲ್ಲಿ ತಂಬಾಕು ಉತ್ಪನ್ನದ ಜಾಹಿರಾತು ಫಲಕಗಳನ್ನು ತೆರವುಗೊಳಿಸಬೇಕು ಎಂದು ತಿಳಿಸಿದರು. ಡಾ.ಪ್ರವೀಣ ದಬಾಡಿ, ಡಾ. ಮಹಾಂತೇಶ ಉಳ್ಳಾಗಡ್ಡಿ, ಡಾ. ಕವಿತಾ ಪಾಟೀಲ, ಸಮಾಜ ಸೇವಕಿ ಕವಿತಾ ರಾಜಣ್ಣನವರ,ಎಎಸ್‌ಐ ನಾಗರಾಜ ಇನ್ನಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ