ಆ್ಯಪ್ನಗರ

ಕೃಷಿ ಉತ್ಪನ್ನಗಳ ಆಮದು ಸುಂಕ ಕಡಿತಕ್ಕೆ ವಿರೋಧ

ಬೆಳಗಾವಿ: ವಿದೇಶಿ ಹಾಲು ಮತ್ತು ಕೃಷಿ ಉತ್ಪನ್ನಗಳ ಮೇಲೆ ಆಮದು ಸುಂಕ ...

Vijaya Karnataka 1 Nov 2019, 5:00 am
ಬೆಳಗಾವಿ: ವಿದೇಶಿ ಹಾಲು ಮತ್ತು ಕೃಷಿ ಉತ್ಪನ್ನಗಳ ಮೇಲೆ ಆಮದು ಸುಂಕ ಕಡಿತಗೊಳಿಸಬಾರದು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಪ್ರತಿಭಟನೆ ನಡೆಸಿದರು.
Vijaya Karnataka Web opposition to import duty on agricultural products
ಕೃಷಿ ಉತ್ಪನ್ನಗಳ ಆಮದು ಸುಂಕ ಕಡಿತಕ್ಕೆ ವಿರೋಧ


ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕಾರ್ಯಕರ್ತರು ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು. ಕೇಂದ್ರ ಸರಕಾರದ ವಿದೇಶಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ(ಫ್ರೀ ಟ್ರೇಡ್‌ ಅಗ್ರಿಮೆಂಟ್‌) ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈಗಾಗಲೇ ಪ್ರಕೃತಿ ವಿಕೋಪ, ಬೆಲೆ ಕುಸಿತ, ಕೃಷಿ ವೆಚ್ಚ ಹೆಚ್ಚಳಕ್ಕೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸತತ ಬರದಿಂದ ಕಂಗೆಟ್ಟಿರುವ ರೈತರಿಗೆ ಹೈನುಗಾರಿಕೆಯೇ ಆಸರೆಯಾಗಿದೆ. ಬೇಡಿಕೆಗಿಂತ ಹೆಚ್ಚು ಹಾಲು ದೇಶದಲ್ಲಿಉತ್ಪಾದನೆಯಾಗುತ್ತಿದೆ. ಇಂಥ ಸ್ಥಿತಿಯಲ್ಲಿಹಾಲು ಉತ್ಪನ್ನಗಳ ಆಮದು ಅಗತ್ಯವೇ ಇಲ್ಲ. ಹೀಗಿದ್ದರೂ ಆಮದು ಸುಂಕ ಕಡಿತ ಮಾಡಿದರೆ, ಹೈನುಗಾರಿಕೆ ನಂಬಿದ್ದ ದೇಶದ ಕೋಟ್ಯಂತರ ರೈತರು ಬೀದಿಪಾಲಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಬೆಳಗಾವಿ ನಗರದ ಹೊರ ವಲಯದಲ್ಲಿಹಲಗಾದಿಂದ ಮಚ್ಚೆ ಗ್ರಾಮದವರೆಗೆ ನಿರ್ಮಾಣಗೊಳ್ಳುತ್ತಿರುವ ಹೊರ ವರ್ತುಲ ರಸ್ತೆಯಿಂದ ಶಹಾಪುರ, ವಡಗಾಂವ, ಅನಗೋಳ, ಮಜಗಾಂವ ಮತ್ತು ಮಚ್ಛೆ ಗ್ರಾಮದ ಸಣ್ಣ ಮತ್ತು ಮಧ್ಯಮ ರೈತರು ಭೂಮಿ ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಉದ್ದೇಶಿತ ಮಾರ್ಗವನ್ನು ಬದಲಿಸಿ ಪರ್ಯಾಯ ಸ್ಥಳದಲ್ಲಿರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ