ಆ್ಯಪ್ನಗರ

ಉಪ ನಿರ್ದೇಶಕರ ಹುದ್ದೆ ಸ್ಥಳಾಂತರಕ್ಕೆ ವಿರೋಧ

ಬೆಳಗಾವಿ: ವಿಭಾಗೀಯ ಕಚೇರಿಯ ಉಪ ನಿರ್ದೇಶಕರ ...

Vijaya Karnataka 19 May 2020, 5:00 am
ಗೋಕಾಕ: ಪ್ರವಾಸೋದ್ಯಮ ಇಲಾಖೆಯ ಬೆಳಗಾವಿ ವಿಭಾಗೀಯ ಕಚೇರಿಯ ಉಪ ನಿರ್ದೇಶಕರ ಹುದ್ದೆಯನ್ನು ಬೆಳಗಾವಿಯಲ್ಲಿಯೇ ಉಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕದಿಂದ ತಹಸೀಲ್ದಾರ ಮೂಲಕ ಮುಖ್ಯಮಂತ್ರಿ ಹಾಗೂ ಪ್ರವಾಸೋದ್ಯಮ ಸಚಿವರಿಗೆ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.
Vijaya Karnataka Web 18GOK3_53
ಬೆಳಗಾವಿ ವಿಭಾಗೀಯ ಕಚೇರಿಯ ಉಪ ನಿರ್ದೇಶಕರ ಹುದ್ದೆಯನ್ನು ಬೆಳಗಾವಿಯಲ್ಲಿಯೇ ಉಳಿಸುವಂತೆ ಆಗ್ರಹಿಸಿ ತಹಸೀಲ್ದಾರ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.


ಸರಕಾರ ಸದ್ದಿಲ್ಲದೆ ಬೆಳಗಾವಿಯ ವಿಭಾಗೀಯ ಉಪ ನಿರ್ದೇಶಕರ ಹುದ್ದೆಯನ್ನು ದಕ್ಷಿಣ ಕನ್ನಡಕ್ಕೆ ಸ್ಥಳಾಂತರಿಸಲು ಹುನ್ನಾರ ನಡೆಸಿರುವದು ಖಂಡನಾರ್ಹ. ಈ ನಿರ್ಧಾರ ಕೈಬಿಟ್ಟು ವಿಭಾಗೀಯ ಪ್ರವಾಸೋದ್ಯಮ ಇಲಾಖೆ ಮತ್ತು ಉಪ ನಿರ್ದೇಶಕರ ಹುದ್ದೆಯನ್ನು ಬೆಳಗಾವಿಯಲ್ಲಿಯೇ ಉಳಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬೆಳಗಾವಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಮನವಿಯಲ್ಲಿಎಚ್ಚರಿಸಲಾಗಿದೆ.

ಕರವೇ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ