ಆ್ಯಪ್ನಗರ

ಪಂಚಮಸಾಲಿ ಮೀಸಲಾತಿಗಾಗಿ 23 ರಿಂದ ಸಿಎಂ ಮನೆ ಎದುರು ಸತ್ಯಾಗ್ರಹ: ಬಸವ ಜಯ ಮೃತ್ಯುಂಜಯ ಶ್ರೀ

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಬೈಲಹೊಂಗಲ ತಾಲೂಕು ಘಟಕದಿಂದ ಮಂಗಳವಾರ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ.

Edited byದಿಲೀಪ್ ಡಿ. ಆರ್. | Vijaya Karnataka 17 May 2022, 8:52 pm
ಬೈಲಹೊಂಗಲ (ಬೆಳಗಾವಿ): 'ಮೀಸಲಾತಿಗಾಗಿ ರಾಜ್ಯಾದ್ಯಂತ ಹಲವಾರು ಬಾರಿ ಹೋರಾಟ ನಡೆಸಲಾಗಿದ್ದು, ಅಧಿವೇಶನ ಸಂದರ್ಭದಲ್ಲಿ ಸರಕಾರ ಕೊಟ್ಟ ಮಾತಿನಂತೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡದೇ ಇದ್ದರೆ ಮೇ 23 ರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿಯ ಮನೆ ಎದುರು ಹಾಗೂ ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಇದು ಮೀಸಲಾತಿಗಾಗಿ ಮಾಡು ಇಲ್ಲವೆ ಮಡಿ ಹೋರಾಟವಾಗಲಿದೆ' ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
Vijaya Karnataka Web basava jaya mruthyunjaya
ಪಂಚಮಸಾಲಿ ಮೀಸಲಾತಿಗಾಗಿ 23 ರಿಂದ ಸಿಎಂ ಮನೆ ಎದುರು ಸತ್ಯಾಗ್ರಹ: ಬಸವ ಜಯ ಮೃತ್ಯುಂಜಯ ಶ್ರೀ


ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಬೈಲಹೊಂಗಲ ತಾಲೂಕು ಘಟಕದಿಂದ ಮಂಗಳವಾರ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸುವ ವೇಳೆ ಅವರು ಮಾತನಾಡಿದರು.

ಸಿಎಂ ತವರಿನಿಂದಲೇ ಮತ್ತೆ ಪಂಚಮಸಾಲಿ ಮೀಸಲಾತಿ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ ವಾರ್ನಿಂಗ್..!
ಘಟಕದ ತಾಲೂಕಾಧ್ಯಕ್ಷ ಶ್ರೀಶೈಲ ಬೋಳಣ್ಣವರ, ಪ್ರ. ಕಾರ್ಯದರ್ಶಿ ಮಹೇಶ ಹರಕುಣಿ ನೇತೃತ್ವ ವಹಿಸಿದ್ದರು. ಕಾಡಾ ಅಧ್ಯಕ್ಷ ಡಾ. ವಿಶ್ವನಾಥ ಪಾಟೀಲ, ಪುರಸಭೆ ಅಧ್ಯಕ್ಷ ರಾಜು ಜನ್ಮಟ್ಟಿ, ಪಂಚನಗೌಡ ದ್ಯಾಮನಗೌಡರ, ಶಂಕರ ಮಾಡಲಗಿ, ರೋಹಿಣಿ ಪಾಟೀಲ, ರಾಜಶೇಖರ ಮೂಗಿ, ಗೀತಾಂಜಲಿ ಪಾಟೀಲ, ಮಹಾಂತೇಶ ತುರಮರಿ, ರುದ್ರಪ್ಪ ಹೊಸಮನಿ, ಶ್ರೀಶೈಲ ಯಡಳ್ಳಿ, ಮಹಾಂತೇಶ ಮತ್ತಿಕೊಪ್ಪ, ಬಾಬು ಕುಡಸೋಮಣ್ಣವರ, ಈಶ್ವರ ಉಳ್ಳೇಗಡ್ಡಿ, ಮಡಿವಾಳಪ್ಪ ಹೋಟಿ, ಎಂ.ವೈ.ಸೋಮಣ್ಣವರ, ಎಫ್‌. ಎಸ್‌. ಸಿದ್ಧನ ಗೌಡರ, ಶಿವಾನಂದ ಬೆಳಗಾವಿ, ರಾಜು ಕುಡಸೋಮನ್ನವರ, ವಿರೇಶ ಹಲಕಿ, ಈರಣ್ಣ ಬೇಟಗೇರಿ, ಮುರಗೇಶ ಗುಂಡ್ಲೂರ, ಶ್ರೀಶೈಲ ಶರಣಪ್ಪನವರ, ಸಂಜೀವಗೌಡ ಪಾಟೀಲ, ಶಂಕರಗೌಡ್ರು ಪಾಟೀಲ, ವಿಠ್ಠಲ ಅಂದಾನಿ, ಶಂಕರ ಕರೀಕಟ್ಟಿ, ಆರ್‌. ಕೆ. ಪಾಟೀಲ, ಮೋಹನ ಪಾಟೀಲ, ಯಲ್ಲಪ್ಪ ಗೌಡರ, ಪಟ್ಟಣದ, ತಾಲೂಕಿನ ನಾನಾ ಗ್ರಾಮಗಳ ಲಿಂಗಾಯತ ಪಂಚಮಸಾಲಿ ಸಮಾಜದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

2ಎ ಹೆಸರಲ್ಲಿ ಸರ್ಕಾರಕ್ಕೆ ಬ್ಲ್ಯಾಕ್‌ಮೇಲ್‌; ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಗಂಭೀರ ಆರೋಪ
ಇದಕ್ಕೂ ಮುಂಚೆ ಮಿನಿ ವಿಧಾನ ಸೌಧದ ಹತ್ತಿರ ಸಭೆ ನಡೆಸಲಾಯಿತು. ಬಸವೇಶ್ವರ ಹಾಗೂ ವೀರ ರಾಣಿ ಕಿತ್ತೂರು ಚನ್ನಮ್ಮ ಮೂರ್ತಿಗಳಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಆರಂಭಿಸಲಾಯಿತು. ಇಂಚಲ ರಸ್ತೆ, ಬಸ್‌ ನಿಲ್ದಾಣ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಎಸಿ ಕಚೇರಿವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ