ಆ್ಯಪ್ನಗರ

2 ಎ ಮೀಸಲಾತಿ ಹೋರಾಟದ ದಿಕ್ಕು ತಪ್ಪಿಸಲು ಮುರುಗೇಶ ನಿರಾಣಿ ಮುಂದಾಗಿರೋದು ದುರಂತ; ದ್ಯಾಮನಗೌಡರ

ಈಗಾಗಲೇ ಕೂಡಲ ಸಂಗಮದಲ್ಲಿ ಪಂಚಮಸಾಲಿ ಪೀಠ ಹಾಗೂ ಹರಿಹರದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ಕಾರ್ಯನಿರ್ವಹಿಸುತ್ತಿವೆ. ಪಂಚಮಸಾಲಿ ಸಮಾಜದ ಮೂಲ ಪೀಠಾಧಿಪತಿ ಕೂಡಲ ಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಸಮಾಜಕ್ಕೆ 2 ಎ ಮೀಸಲಾತಿ ಕೊಡಿಸಲು ಹೋರಾಟ ನಡೆಸಿದ್ದಾರೆ. ಈ ಹೋರಾಟವನ್ನು ಹತ್ತಿಕ್ಕಲು ಸಚಿವ ಮುರುಗೇಶ ನಿರಾಣಿ ಮೂರನೇ ಪೀಠ ಸ್ಥಾಪನೆ ಮಾಡಲು ಹೊರಟಿರುವುದು ದುರಂತ ಎಂದು ಪಂಚನಗೌಡ ದ್ಯಾಮನಗೌಡರ ಹೇಳಿದರು.

Vijaya Karnataka Web 27 Jan 2022, 2:08 pm
ಬೆಳಗಾವಿ: ಮೂರನೇ ಪಂಚಮಸಾಲಿ ಪೀಠ ಸ್ಥಾಪನೆಗೆ ಮುಂದಾಗಿರುವ ಸಚಿವ ಮುರುಗೇಶ ನಿರಾಣಿ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟದ ದಿಕ್ಕು ತಪ್ಪಿಸುವ ಹುನ್ನಾರ ನಡೆಸಿದ್ದಾರೆ ಎಂದು ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಪಂಚನಗೌಡ ದ್ಯಾಮನಗೌಡರ ಆರೋಪಿಸಿದರು.
Vijaya Karnataka Web Panchanagouda Dyamana Gouda


ಗುರುವಾರ ನಗರದ ಗಾಂಧಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕೂಡಲ ಸಂಗಮದಲ್ಲಿ ಪಂಚಮಸಾಲಿ ಪೀಠ ಹಾಗೂ ಹರಿಹರದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ಕಾರ್ಯನಿರ್ವಹಿಸುತ್ತಿವೆ. ಪಂಚಮಸಾಲಿ ಸಮಾಜದ ಮೂಲ ಪೀಠಾಧಿಪತಿ ಕೂಡಲ ಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಸಮಾಜಕ್ಕೆ 2 ಎ ಮೀಸಲಾತಿ ಕೊಡಿಸಲು ಹೋರಾಟ ನಡೆಸಿದ್ದಾರೆ. ಈ ಹೋರಾಟವನ್ನು ಹತ್ತಿಕ್ಕಲು ಸಚಿವ ಮುರುಗೇಶ ನಿರಾಣಿ ಮೂರನೇ ಪೀಠ ಸ್ಥಾಪನೆ ಮಾಡಲು ಹೊರಟಿರುವುದು ದುರಂತ ಎಂದು ಹೇಳಿದರು.
ಮುರುಗೇಶ್ ನಿರಾಣಿ ಮಾತಿನಿಂದ ಬೇಸರವಾಗಿದೆ;ಜಯ ಮೃತ್ಯುಂಜಯ ಶ್ರೀ
ಸಮಾಜದ ಬಗ್ಗೆ ಕಳಕಳಿ ಇರದ ಮುರಗೇಶ್‌ ನಿರಾಣಿ ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಮೂರನೇ ಪೀಠ ಮಾಡಲು ತುದಿಗಾಲ ಮೇಲೆ ನಿಂತಿದ್ದೂ ಅಲ್ಲದೆ, ಮೂರನೇ ಪೀಠಕ್ಕೆ ಜಯ ಮೃತ್ಯುಂಜಯ ಶ್ರೀಗಳೂ ಅನುಮತಿ ನೀಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಪಂಚಮಸಾಲಿ ಸಮುದಾಯದ ಆರ್.ಕೆ.ಪಾಟೀಲ, ರೋಹಿಣಿ ಪಾಟೀಲ, ಗುಂಡು ಪಾಟೀಲ ಇನ್ನಿತರ ಮುಖಂಡರು ಸುದ್ದಿಗೋಷ್ಠಿಯಲ್ಲಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ