ಆ್ಯಪ್ನಗರ

ವೇತನ ಪಾವತಿ ಭರವಸೆ: ಪೌರಕಾರ್ಮಿಕರ ಪ್ರತಿಭಟನೆ ಹಿಂದಕ್ಕೆ

ಬೆಳಗಾವಿ: ವೇತನ ಪಾವತಿಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಧರಣಿ ಕೈಗೊಂಡಿದ್ದ ಮಹಾನಗರ ಪಾಲಿಕೆ ಪೌರಕಾರ್ಮಿಕರು ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಗುರುವಾರ ...

Vijaya Karnataka 11 Jan 2019, 5:00 am
ಬೆಳಗಾವಿ : ವೇತನ ಪಾವತಿಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಧರಣಿ ಕೈಗೊಂಡಿದ್ದ ಮಹಾನಗರ ಪಾಲಿಕೆ ಪೌರಕಾರ್ಮಿಕರು ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಗುರುವಾರ ಧರಣಿ ಹಿಂಪಡೆದಿದ್ದಾರೆ.
Vijaya Karnataka Web BLG-1001-2-52-10MAHESH3


ನಗರದಲ್ಲಿನ ತ್ಯಾಜ್ಯ ಸಂಗ್ರಹಣೆ ಕೈ ಬಿಟ್ಟು ಗುರುವಾರವೂ ಪಾಲಿಕೆ ಆವರಣದಲ್ಲಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ನಾಲ್ಕು ತಿಂಗಳಿಂದ ವೇತನ ಪಾವತಿ ಮಾಡದಿರುವ ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪಾಲಿಕೆ ಆರೋಗ್ಯ ಮತ್ತು ಪರಿಸರ ಅಧಿಕಾರಿಗಳು ಜ. 12ರೊಳಗೆ ಅಕ್ಟೋಬರ್‌ ತಿಂಗಳ ವೇತನ ಪಾವತಿಸಿ ಇನ್ನುಳಿದ ಬಾಕಿ ವೇತನ ಪಾವತಿಗೂ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ನಿರತರು ತಾತ್ಕಾಲಿಕವಾಗಿ ಧರಣಿ ಹಿಂಪಡೆದರು. ಕಾರ್ಮಿಕರ ಮುಖಂಡ ರಮೇಶ ಗೊಲ್ಲರ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ