ಆ್ಯಪ್ನಗರ

ಮಾಹಿತಿ ಒದಗಿಸದ ಅಧಿಕಾರಿಗಳಿಗೆ ದಂಡ

ಮಾಹಿತಿ ಹಕ್ಕು ಅಡಿ ಕೇಳಲಾದ ಮಾಹಿತಿಯನ್ನು ಸಕಾಲದಲ್ಲಿ ಒದಗಿಸದ ಮೂರು ಪ್ರಕರಣಗಳಲ್ಲಿ ಮಾಹಿತಿ ಆಯೋಗದ ಆಯುಕ್ತರು ತಪ್ಪಿತಸ್ಥ ಅಧಿಕಾರಿಗಳಿಗೆ ತಲಾ 10 ...

Vijaya Karnataka 4 Apr 2019, 5:00 am
ಬೆಳಗಾವಿ: ಮಾಹಿತಿ ಹಕ್ಕು ಅಡಿ ಕೇಳಲಾದ ಮಾಹಿತಿಯನ್ನು ಸಕಾಲದಲ್ಲಿ ಒದಗಿಸದ ಮೂರು ಪ್ರಕರಣಗಳಲ್ಲಿ ಮಾಹಿತಿ ಆಯೋಗದ ಆಯುಕ್ತರು ತಪ್ಪಿತಸ್ಥ ಅಧಿಕಾರಿಗಳಿಗೆ ತಲಾ 10 ಸಾವಿರ ರೂ. ತಂಡ ವಿಧಿಸಿದ್ದಾರೆ ಎಂದು ರಾಮದುರ್ಗದ ಮಾಹಿತಿ ಹಕ್ಕು ಕಾರ್ಯಕರ್ತ ಶ್ರೀನಿವಾಸಗೌಡ ಪಾಟೀಲ ತಿಳಿಸಿದ್ದಾರೆ.
Vijaya Karnataka Web penalties for officers not provided information
ಮಾಹಿತಿ ಒದಗಿಸದ ಅಧಿಕಾರಿಗಳಿಗೆ ದಂಡ


ಎರಡು ವಿಷಯಗಳ ಕುರಿತು ಮಾಹಿತಿ ನೀಡುವಂತೆ ರಾಮದುರ್ಗ ತಾಲೂಕು ಪಂಚಾಯಿತಿ ವ್ಯವಸ್ಥಾಪಕರಿಗೆ ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಅವರು ಸಕಾಲದಲ್ಲಿ ಮಾಹಿತಿ ಒದಗಿಸದೇ ಇದ್ದರಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಮೇಲ್ಮನವಿಗೂ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ಆಯೋಗದ ಆಯುಕ್ತರು ನನ್ನ ಎರಡು ಅರ್ಜಿಗಳಿಗೆ ತಲಾ 10 ಸಾವಿರದಂತೆ ಒಟ್ಟು 20 ಸಾವಿರ ರೂ. ದಂಡ ವಿಧಿಸಿದ್ದಾರೆ.

ರಾಮದುರ್ಗ ತಾಲೂಕಿನ ಮುದೇನೂರು ಗ್ರಾಪಂ ಪಿಡಿಒಗೆ ಮಾಹಿತಿ ಹಕ್ಕು ಅಡಿ ಮಾಹಿತಿ ಕೇಳಿ ಅರ್ಜಿ ಸಲ್ಲಿಸಲಾಗಿತ್ತು. ಸಕಾಲದಲ್ಲಿ ಮಾಹಿತಿ ಒದಗಿದ ಕಾರಣ ಮಾಹಿತಿ ಆಯೋಗದ ಆಯುಕ್ತರು ಪಿಡಿಒ ಶೇಖರ ಹಿರೇಸೋಮಣ್ಣವರ ಅವರಿಗೆ 10 ಸಾವಿರ ರೂ. ದಂಡ ವಿಧಿಸಿದ್ದಾರೆ ಎಂದು ಶ್ರೀನಿವಾಸಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ