ಆ್ಯಪ್ನಗರ

ಪ್ಲಾಸ್ಟಿಕ್‌ ಬಳಕೆ ಮಾಡುವ ಅಂಗಡಿಗಳಿಗೆ ದಂಡ

ಅಥಣಿ: ಪಟ್ಟಣದಲ್ಲಿ ವರ್ತಕರಿಗೆ ಈಗಾಗಲೇ ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಪುರಸಭೆ ವತಿಯಿಂದ ಅನೇಕ ಬಾರಿ ಅರಿವು ಮೂಡಿಸಿದ್ದರೂ ಪ್ಲಾಸ್ಟಿಕ್‌ ಬಳಕೆ ಮುಂದುವರಿದ ...

Vijaya Karnataka 28 Jun 2019, 5:00 am
ಅಥಣಿ : ಪಟ್ಟಣದಲ್ಲಿ ವರ್ತಕರಿಗೆ ಈಗಾಗಲೇ ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಪುರಸಭೆ ವತಿಯಿಂದ ಅನೇಕ ಬಾರಿ ಅರಿವು ಮೂಡಿಸಿದ್ದರೂ ಪ್ಲಾಸ್ಟಿಕ್‌ ಬಳಕೆ ಮುಂದುವರಿದ ಹಿನ್ನೆಲೆಯಲ್ಲಿ ದಂಡ ವಿಧಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಕವಲಾಪುರೆ ತಿಳಿಸಿದ್ದಾರೆ.
Vijaya Karnataka Web BEL-27 ATHANI-02


ಅವರು ಪಟ್ಟಣದಲ್ಲಿ ಗುರುವಾರ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ ಕಿರಾಣಿ, ಬೇಕರಿ, ಬಟ್ಟೆ ಅಂಗಡಿ ಸೇರಿದಂತೆ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್‌ ಬ್ಯಾಗ್‌ ಮತ್ತು ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು ವ್ಯಾಪಾರಸ್ಥರಿಗೆ ಬಿಸಿ ಮುಟ್ಟಿಸಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿ, ಸಾರ್ವಜನಿಕರು ಮಾರುಕಟ್ಟೆಗೆ ಹೋಗುವಾಗ ಮನೆಯಿಂದಲೇ ಕೈಚೀಲ ತರಬೇಕು. ಮಾರುಕಟ್ಟೆಯಲ್ಲಿ ಕ್ಯಾರಿ ಬ್ಯಾಗ್‌ ಬಳಕೆಯಿಂದ ಪರಿಸರ ಮಾಲಿನ್ಯವಾಗಿ ಜನ, ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ. ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿದಾಗ ಸುಂದರ ನಗರವಾಗಲು ಸಾಧ್ಯ ಎಂದರು.

ಪುರಾತನ ಜೋಡಿ ಕರೆಗಳ ಸುತ್ತಲಿನ ಪ್ರದೇಶದ ಸ್ವಚ್ಛತೆ ಕಾಪಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ ಕಾನೂನು ಕ್ರಮ ಕೈಕೊಳ್ಳಲಾಗುವುದು. ಈ ಕೆರೆಯಲ್ಲಿ ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆ ಕೂಡ ನಿಷೇಧಿಸಲಾಗಿದೆ ಎಂದರು.

ಪುರಸಭೆ ಆರೋಗ್ಯಾಧಿಕಾರಿ ಎಸ್‌.ಎ. ಚೌಗಲಾ ಹಾಗೂ ಸಿಬ್ಬಂದಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ