ಆ್ಯಪ್ನಗರ

ಕಂದಾಯ ಇಲಾಖೆಯಿಂದ ಆ.15ರವರೆಗೆ ಪಿಂಚಣಿ ಆಂದೋಲನ

ರೂಪಾ ಕುಲಕರ್ಣಿ ಖಾನಾಪುರ ಸರಕಾರದ ಸಾಮಾಜಿಕ ಭದ್ರತಾ ಯೋಜನೆಯಡಿ ...

Vijaya Karnataka 14 Jul 2019, 5:00 am
ರೂಪಾ ಕುಲಕರ್ಣಿ ಖಾನಾಪುರ
Vijaya Karnataka Web BEL-13KHANAPUR1

ಸರಕಾರದ ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಪಿಂಚಣಿ ಸೌಲಭ್ಯ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬ ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷ ಕರು, ಉಪ ತಹಸೀಲ್ದಾರರು ಮತ್ತು ತಹಸೀಲ್ದಾರರು ಮನೆ-ಮನೆಗೆ ಭೇಟಿ ನೀಡುವಂತೆ ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್‌.ಬಿ ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ ಸಾಕಷ್ಟು ಕುಟುಂಬಗಳು ಇದುವರೆಗೂ ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ, ವೃದ್ಧಾಪ್ಯ ವೇತನ, ಮನಸ್ವಿನಿ ಹಾಗೂ ಮೈತ್ರಿ ಮತ್ತಿತರ ಪಿಂಚಣಿ ಸೌಲಭ್ಯಗಳನ್ನು ಪಡೆಯುತ್ತಿಲ್ಲ. ಈ ನಿಟ್ಟಿನಲ್ಲಿ ಆ.15ರ ಒಳಗೆ ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಅಧಿಕಾರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೆ ತೆರಳಿ ಮನೆ-ಮನೆಗೆ ಭೇಟಿ ನೀಡುವ ಮೂಲಕ ಅರ್ಹರಿಗೆ ಪಿಂಚಣಿ ಸೌಲಭ್ಯ ಒದಗಿಸಬೇಕೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಅಲ್ಲದೆ, ಈ ವಿಷಯವಾಗಿ ಪ್ರತಿಯೊಬ್ಬರ ಗ್ರಾಮ ಭೇಟಿ ಮತ್ತು ಪಿಂಚಣಿ ಯೋಜನೆಯ ಪ್ರಗತಿಯ ವಿವರವನ್ನು ನಿಯಮಿತವಾಗಿ ತಮ್ಮ ಕಚೇರಿಗೆ ತಿಳಿಸುವಂತೆ ಸೂಚಿಸಿರುವ ಅವರು, ಪಿಂಚಣಿ ಪಡೆಯಲು ಮತ್ಯಾರೂ ಬಾಕಿ ಉಳಿದಿಲ್ಲವೆಂದು ಆ.15ರಂದು ಪ್ರಮಾಣಪತ್ರ ಸಲ್ಲಿಸುವಂತೆ ತಮ್ಮ ಅಧಿಕೃತ ಜ್ಞಾಪನದಲ್ಲಿ ಸೂಚಿಸಿದ್ದಾರೆ.

ಅಧಿಕಾರಿ, ಸಿಬ್ಬಂದಿ ಏನು ಮಾಡಬೇಕು? :
* ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪಿಂಚಣಿ ಆಂದೋಲನ ಕಾರ್ಯಕ್ರಮದ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಪ್ರಾರ್ಥನಾ ಮಂದಿರಗಳು, ಶಾಲಾ-ಕಾಲೇಜುಗಳು, ಗ್ರಾಮ ಪಂಚಾಯಿತಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ವಾರದ ಸಂತೆ ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಚಾರ ನೀಡಬೇಕು.

* ಹಳ್ಳಿಗಳಲ್ಲಿ ಡಂಗುರ ಸಾರಿ ಪಿಂಚಣಿ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಬೇಕು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ