ಆ್ಯಪ್ನಗರ

ಕಾಂಗ್ರೆಸ್‌ನಿಂದ ಜನಪರ ಪ್ರಣಾಳಿಕೆ: ಕಾರ್ತಿಕಗೌಡ ಪಾಟೀಲ

ಬೈಲಹೊಂಗಲ: ಪಂಚರಾಜ್ಯ ಚುನಾವಣೆಯಲ್ಲಿ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ವಾರದೊಳಗೆ ರಾಹುಲ್‌ ಗಾಂಧಿ ಅವರು ರೈತರ ಸಾಲಮನ್ನಾ ಘೋಷಣೆ ಮಾಡಿದ್ದಾರೆ...

Vijaya Karnataka 3 Apr 2019, 5:00 am
ಬೈಲಹೊಂಗಲ : ಪಂಚರಾಜ್ಯ ಚುನಾವಣೆಯಲ್ಲಿ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ವಾರದೊಳಗೆ ರಾಹುಲ್‌ ಗಾಂಧಿ ಅವರು ರೈತರ ಸಾಲಮನ್ನಾ ಘೋಷಣೆ ಮಾಡಿದ್ದಾರೆ. ಅದರಂತೆ ಈಗಲೂ ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಫಲಾನುಭವಿಗಳಿಗೆ ವಾರ್ಷಿಕ 72 ಸಾವಿರ ರೂ.ನಂತೆ ಮಾಸಿಕ 6 ಸಾವಿರ ರೂ. ನೀಡಲಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕಾರ್ತಿಕಗೌಡ ಪಾಟೀಲ ಹೇಳಿದರು.
Vijaya Karnataka Web BEL-2HTP2


ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಹೊರಡಿಸಿದ ಜನಪರ ಪ್ರಣಾಳಿಕೆಯಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿ ರಾಹುಲ್‌ ಗಾಂಧಿ ಅವರು ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿನ ಚುನಾವಣೆ ವೇಳೆ ನೀಡಿದ ಯಾವುದೇ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ. ಯಾರ ಖಾತೆಗೂ 15 ಲಕ್ಷ ಬಂದಿಲ್ಲ. ಅವೈಜ್ಞಾನಿಕ ಜಿಎಸ್‌ಟಿಯಿಂದ ಲಕ್ಷಾಂತರ ಉದ್ಯಮಿಗಳು, ಮಧ್ಯಮ ಕೈಗಾರಿಕೆಗಳು ನಾಶವಾದವು. ರೈತರ ಸಾಲ ಮನ್ನಾ ವಿರೋಧಿಸಿದರು. ಹಿಂದುಳಿದ, ಪರಿಶಿಷ್ಟ ವರ್ಗಗಳ ಸಬ್‌ ಪ್ಲಾನ್‌ ರದ್ದುಗೊಳಿಸಿದರು. ಆಹಾರ ಭದ್ರತೆ ಕಾಯ್ದೆ ವಿರೋಧಿಸಿದರು ಎಂದು ಟೀಕಿಸಿದರು.

ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಮಹಾಂತೇಶ ಮತ್ತಿಕೊಪ್ಪ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧಿಕ ಅಂಕಲಗಿ, ಜಿಲ್ಲಾ ಕಾರ್ಯದರ್ಶಿ ವಿಷ್ಣು ಕಾರಭಾಗಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ