ಆ್ಯಪ್ನಗರ

ಕಣಕುಂಬಿಯಲ್ಲಿ ಶಾಶ್ವತ ಚೆಕ್‌ಪೋಸ್ಟ್‌

ಬೆಳಗಾವಿ: ಕಳಸಾ-ಬಂಡೂರಿ ಯೋಜನೆ ಪ್ರದೇಶದ ಕಣಕುಂಬಿಯಲ್ಲಿ ಕಾನೂನು ...

Vijaya Karnataka 10 Aug 2018, 5:00 am
ಬೆಳಗಾವಿ: ಕಳಸಾ-ಬಂಡೂರಿ ಯೋಜನೆ ಪ್ರದೇಶದ ಕಣಕುಂಬಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಾಶ್ವತ ಚೆಕ್‌ ಪೋಸ್ಟ್‌ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಉತ್ತರ ವಲಯ ಐಜಿಪಿ ಅಲೋಕಕುಮಾರ ತಿಳಿಸಿದ್ದಾರೆ.
Vijaya Karnataka Web permanent check post in kanakumbi
ಕಣಕುಂಬಿಯಲ್ಲಿ ಶಾಶ್ವತ ಚೆಕ್‌ಪೋಸ್ಟ್‌


ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ-ಬಂಡೂರಿ ಪ್ರಕರಣ ನ್ಯಾಯಾಧಿಕರಣದಲ್ಲಿರುವುದರಿಂದ ಕಣಕುಂಬಿ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಅತ್ಯಗತ್ಯ. ಗೋವಾ, ಮಹಾರಾಷ್ಟ್ರದ ಅಧಿಕಾರಿಗಳು, ಜನಪ್ರತಿನಿಧಿಗಳು ಆಕಸ್ಮಿಕವಾಗಿ ಅಲ್ಲಿಗೆ ಭೇಟಿ ನೀಡಿದರೆ ತಪ್ಪು ತಿಳಿವಳಿಕೆಯಿಂದ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೆ ವಿವಾದಿತ ಪ್ರದೇಶಕ್ಕೆ ಭೇಟಿ ನೀಡುವುದು ಮತ್ತು ಅಲ್ಲಿ ಫೋಟೋ ತೆಗೆಯುವುದು, ಸರ್ವೆ ನಡೆಸುವಂತ ವರ್ತನೆ ಸ್ಥಳೀಯರನ್ನು ಪ್ರಚೋದಿಸುವ ಸಾಧ್ಯತೆಯಿದೆ. ಆದ್ದರಿಂದ ಕಾನೂನು, ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ಕಣಕುಂಬಿ ಪ್ರದೇಶದಲ್ಲಿ ವಿವಾದ ಇತ್ಯರ್ಥ ಆಗುವವರೆಗೂ ಶಾಶ್ವತ ಸ್ವರೂಪದ ಚೆಕ್‌ ಪೋಸ್ಟ್‌ ತೆರೆಯಲು ಈಗಾಗಲೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಗೋವಾ ರಾಜ್ಯದಿಂದ ಅಧಿಕಾರಿಗಳು, ಸಚಿವರು, ಶಾಸಕರು ಯಾರೇ ಬಂದರೂ ರಾಜ್ಯದ ಪೊಲೀಸರು ಆಕ್ಷೇಪ ವ್ಯಕ್ತಪಡಿಸುವುದಿಲ್ಲ. ಆದರೆ, ಅವರು ಬರುವುದಕ್ಕೂ ಮೊದಲು ಮಾಹಿತಿ ನೀಡಿ ಬಂದರೆ ಭದ್ರತೆ ಒದಗಿಸಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಪೂರ್ವ ಮಾಹಿತಿ ನೀಡದೆ ಕಣಕುಂಬಿ ಪ್ರದೇಶಕ್ಕೆ ಪದೇ ಪದೆ ಗೋವಾ ಸರಕಾರದ ಅಧಿಕಾರಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಗೋವಾ ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆಗೂ ಚರ್ಚೆ ನಡೆಸಲಾಗಿದೆ ಎಂದು ಐಜಿಪಿ ಅಲೋಕಕುಮಾರ ತಿಳಿಸಿದರು.

ಆ.20ರಂದು ಮಹದಾಯಿ ನ್ಯಾಯಾಧಿಕರಣ ತೀರ್ಪು ಪ್ರಕಟವಾಗುವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುವುದು. ನ್ಯಾಯಾಧಿಕರಣದ ತೀರ್ಪು ಏನೇ ಬಂದರೂ ಕಾನೂನು ಉಲ್ಲಂಘನೆ ಆಗದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯ.
- ಅಲೋಕಕುಮಾರ, ಐಜಿಪಿ, ಉತ್ತರ ವಲಯ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ