ಆ್ಯಪ್ನಗರ

ಪೆಟ್ರೋಲ್‌ ಬಾಂಬ್‌ ಪ್ರಕರಣ ಸೆಷನ್ಸ್‌ ಕೋರ್ಟ್‌ಗೆ

ಬೆಳಗಾವಿ: ನಗರದ ಎಸ್‌ಪಿಎಂ ರಸ್ತೆಯಲ್ಲಿರುವ ಪ್ರಕಾಶ್‌ ಚಿತ್ರ ...

Vijaya Karnataka 14 Mar 2020, 5:00 am
ಬೆಳಗಾವಿ: ನಗರದ ಎಸ್‌ಪಿಎಂ ರಸ್ತೆಯಲ್ಲಿರುವ ಪ್ರಕಾಶ್‌ ಚಿತ್ರ ಮಂದಿರದ ಮೇಲೆ ಪೆಟ್ರೋಲ… ಬಾಂಬ್‌ ಎಸೆದ ಪ್ರಕರಣದ ವಿಚಾರಣೆ ನಡೆಸುತ್ತಿದ್ದ 3ನೇ ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ ಪ್ರಕರಣವನ್ನು ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸಿದೆ.
Vijaya Karnataka Web petrol bomb case to sessions court
ಪೆಟ್ರೋಲ್‌ ಬಾಂಬ್‌ ಪ್ರಕರಣ ಸೆಷನ್ಸ್‌ ಕೋರ್ಟ್‌ಗೆ


ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಒಂಬತ್ತು ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅದರಲ್ಲಿಬಂಧನದಲ್ಲಿದ್ದ ಮಹಾರಾಷ್ಟ್ರ ಮೂಲದ ಹೃಷಿಕೇಶ ಮಾವುಲಿ, ಬೆಳಗಾವಿಯ ಪ್ರವೀಣ ಚತುರ ಅವರನ್ನು ಪೊಲೀಸರು ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು.

ಬೆಳಗ್ಗೆ ವಿಚಾರಣೆ ನಡೆಸಿದ 3ನೇ ಜೆಎಂಎಫ್‌ ನ್ಯಾಯಾಲಯ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿತು. ಮಧ್ಯಾಹ್ನದ ನಂತರ ಕಲಾಪ ನಡೆದಾಗ ಪ್ರಕರಣವನ್ನು ಸೆಷನ್ಸ್‌ ಕೋರ್ಟ್‌ಗೆ ವರ್ಗಾಯಿಸಿ ಆದೇಶ ಮಾಡಿತು.

2018ರ ಜನವರಿ 25 ರಂದು ನಗರದ ಪ್ರಕಾಶ್‌ ಚಿತ್ರಮಂದಿರದಲ್ಲಿಹಿಂದಿಯ 'ಪದ್ಮಾವತ್‌' ಚಿತ್ರ ಪ್ರದರ್ಶನ ನಡೆಯುತ್ತಿದ್ದಾಗ ಚಿತ್ರಮಂದಿರದ ಮೇಲೆ ಪೆಟ್ರೋಲ… ಬಾಂಬ್‌ ದಾಳಿ ನಡೆದಿತ್ತು. ಈ ಸಂಬಂಧ ಒಟ್ಟು 11 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಪೈಕಿ ಪೊಲೀಸರ ವಶದಲ್ಲಿರುವ ಹೃಷಿಕೇಶ್‌, ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿಹಾಗೂ ಪ್ರವೀಣ ಚತುರ ಸಾಹಿತಿ ಎಂ.ಎಂ.ಕಲ್ಬುರ್ಗಿ ಅವರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ