ಆ್ಯಪ್ನಗರ

ನೀರಿನ ಸಮಸ್ಯೆ ನಿವಾರಣೆಗೆ ಯೋಜನೆ

115 ಕೋಟಿ ರೂ...

Vijaya Karnataka 1 Jul 2018, 5:00 am
ಬೆಳಗಾವಿ: ದಕ್ಷಿಣ ಮತಕ್ಷೇತ್ರದ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ 12 ಗ್ರಾಮಗಳಿಗೆ 115 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು.
Vijaya Karnataka Web BEL-30 LBS 9


ತಾಲೂಕಿನ ಯಳ್ಳೂರು ಗ್ರಾಮಕ್ಕೆ ಶನಿವಾರ ಜಿಲ್ಲಾ ಪಂಚಾಯಿತಿ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಯಳ್ಳೂರ ಗ್ರಾಮದಲ್ಲಿ 15 ದಿನಕ್ಕೊಮ್ಮೆ ನೀರು ಪೂರೈಸುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಅದಕ್ಕಾಗಿ ಅಧಿಧಿಕಾರಿಗಳ ಸಮೇತ ಇಲ್ಲಿಗೆ ಬಂದಿದ್ದೇನೆ. ದಕ್ಷಿಣ ಮತಕ್ಷೇತ್ರದ ಎಲ್ಲ ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಡಿಸೆಂಬರ್‌ ಒಳಗಾಗಿ ಯೋಜನೆಗೆ ಮಂಜೂರಾತಿ ಪಡೆದು ಎರಡು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ದಕ್ಷಿಣ ಮತಕ್ಷೇತ್ರದ ಯಳ್ಳೂರ, ಪೀರನವಾಡಿ, ಧಾಮಣೆ (ಎಸ್‌) ಹಾಗೂ ಮಚ್ಚೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸ್ಕೊಂಡನಹಟ್ಟಿ, ದೇವಗನಹಟ್ಟಿ, ಕುರುಬರಹಟ್ಟಿ, ಅವಚಾರಹಟ್ಟಿ, ಯರಮಾಳ, ಝಾಡ-ಶಹಾಪುರ, ಬಾಳಗಮಟ್ಟಿ, ಹುಂಚ್ಯಾನಹಟ್ಟಿ ಹಾಗೂ ಕೇದಾರವಾಡಿ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಈ ಯೋಜನೆಯಿಂದ ನಿವಾರಣೆಯಾಗಲಿದೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ