ಆ್ಯಪ್ನಗರ

ನಗರದಲ್ಲಿ ಇಂದಿನಿಂದ ಸಸ್ಯಸಂತೆ

ಬೆಳಗಾವಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತೋಟಗಾರಿಕೆ ಇಲಾಖೆ ವತಿಯಿಂದ ನಗರದ ಹ್ಯೂಂ ಪಾರ್ಕ್‌ನಲ್ಲಿ ಜೂ...

Vijaya Karnataka 5 Jun 2018, 5:00 am
ಬೆಳಗಾವಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತೋಟಗಾರಿಕೆ ಇಲಾಖೆ ವತಿಯಿಂದ ನಗರದ ಹ್ಯೂಂ ಪಾರ್ಕ್‌ನಲ್ಲಿ ಜೂ.5ರಿಂದ 25ರ ವರೆಗೆ ಸಸ್ಯ ಸಂತೆ ಹಾಗೂ ತೋಟಗಾರಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಅಪರ ನಿರ್ದೇಶಕ ಪ್ರಕಾಶ ಸೊಬರದ ಹೇಳಿದರು.
Vijaya Karnataka Web BEL-4 LBS 15


ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರೈತರ ಆರ್ಥಿಕ ಆದಾಯ ಹೆಚ್ಚಬೇಕೆಂಬ ಉದ್ದೇಶದಿಂದ ಇಲಾಖೆ ವತಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಸ್ಯ ಸಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲಾಖೆ ವತಿಯಿಂದ ರೈತರಿಗಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ನಗರದಲ್ಲಿ ಕೈತೋಟ ಬೆಳೆಸುವವರಿಗೂ ಮಾಹಿತಿ ನೀಡಲಾಗುವುದು. ಪ್ರತಿ ತಾಲೂಕು ಕೇಂದ್ರಗಳಲ್ಲೂ ಮುಂದಿನ ತಿಂಗಳು ಸಸ್ಯಸಂತೆ ಹಮ್ಮಿಕೊಳ್ಳಲಾಗುವುದು ಎಂದರು.

ಮಂಗಳವಾರ ಬೆಳಗ್ಗೆ 11 ಗಂಟೆಗೆ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಸಸ್ಯೆಸಂತೆ ಉದ್ಘಾಟಿಸುವರು. ತೋಟಗಾರಿಕೆ ಇಲಾಖೆಯ ಹಿರಿಯ ನಿರ್ದೇಶಕ ಮಂಜುನಾಥ ನಾರಾಯಣ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ