ಆ್ಯಪ್ನಗರ

ಮಾನವ ಕಳ್ಳ ಸಾಗಣೆ ತಡೆಗೆ ಪೊಲೀಸರು ವಿಫಲ

ಬೆಳಗಾವಿ: ಜಿಲ್ಲೆಯಲ್ಲಿ ಮಾನವ ಕಳ್ಳ ಸಾಗಣೆ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚಾಗಿದ್ದು, ಇವುಗಳನ್ನು ತಡೆಯುವಲ್ಲಿ ಅಧಿಕಾರಿಗಳು ಹಾಗೂ ...

Vijaya Karnataka 31 Oct 2018, 5:00 am
ಬೆಳಗಾವಿ : ಜಿಲ್ಲೆಯಲ್ಲಿ ಮಾನವ ಕಳ್ಳ ಸಾಗಣೆ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚಾಗಿದ್ದು, ಇವುಗಳನ್ನು ತಡೆಯುವಲ್ಲಿ ಅಧಿಕಾರಿಗಳು ಹಾಗೂ ಪೊಲೀಸರು ವಿಫಲರಾಗಿದ್ದಾರೆ ಎಂದು ಮಾನವ ಸಾಗಣೆ ವಿರೋಧಿ ಆಂದೋಲನ-ಕರ್ನಾಟಕ (ನ್ಯಾಟ್‌-ಕೆ) ಸಂಸ್ಥೆಯ ಸದಸ್ಯೆ ವಿ.ಸುಶೀಲ ಆರೋಪಿಸಿದರು.
Vijaya Karnataka Web BEL-30 LBS 1


ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಪ್ರಮುಖ ನಗರ, ಪಟ್ಟಣಗಳಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಅಂತಹ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಕ್ಷಣೆ ಮತ್ತು ಪುನರ್ವಸತಿ ಕಲ್ಪಿಸುವುದಕ್ಕಾಗಿ ಶ್ರಮಿಸುತ್ತಿದೇವೆ. ಹಲವು ಪ್ರಕರಣಗಳಲ್ಲಿ ಕಣ್ಣಾರೆಯಾಗಿ ಅಲ್ಲಿನ ಸ್ಥಿತಿಗತಿ ಅರಿತಿದ್ದೇವೆ. ಪ್ರಕರಣದ ಸಾಕ್ಷಿಯನ್ನಾಗಿ ಮಾಡಿದರೆ ಸಮಗ್ರ ಮಾಹಿತಿ ನೀಡುತ್ತೇವೆ. ಆದರೆ, ನಮ್ಮ ಹೇಳಿಕೆ ಸಾಕ್ಷಿಯಾಗಿ ಪಡೆಯುತ್ತಿಲ್ಲ. ಪೊಲೀಸರಿಂದ ಸರಿಯಾಗಿ ತನಿಖೆ ನಡೆಯುತ್ತಿಲ್ಲ ಎಂದು ಅವರು ದೂರಿದರು.

ಮಾನವ ಕಳ್ಳ ಸಾಗಣೆ ತಡೆಯುವ ಸಲುವಾಗಿ ಕೆಲಸ ಮಾಡುವ ಎನ್‌ಜಿಒಗಳಿಗೆ ಕೆಲವರು ಕಿರಕುಳ ನೀಡುತ್ತಿದ್ದಾರೆ. ಕಳ್ಳರ ಜಾಲದಲ್ಲಿ ತೊಡಗಿರುವವರ ಜತೆ ಕೆಲ ಅಧಿಕಾರಿಗಳು ಶಾಮೀಲಾಗಿದ್ದಾರೆ. ಜಿಲ್ಲೆಯಲ್ಲಿ ಕಾನೂನಿನ ಕಠಿಣ ಕ್ರಮ ಜಾರಿಯಾಗಬೇಕು. ಮಾನವ ಕಳ್ಳ ಸಾಗಣೆ ಮತ್ತು ಲೈಂಗಿಕ ದೌರ್ಜನ್ಯದಂಥ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಸುಶೀಲಾ ಒತ್ತಾಯಿಸಿದರು.

ಅಥಣಿ ನ್ಯಾಟ್‌-ಕೆ ವಿಮೋಚನ ರಾಜ್ಯ ಸದಸ್ಯ ಬಿ.ಎಲ್‌. ಪಾಟೀಲ ಮಾತನಾಡಿ, ಅಧಿಕಾರಿಗಳು ಹಾಗೂ ಪೊಲೀಸರ ನಿರ್ಲಕ್ಷ್ಯದಿಂದ ಮಾನವ ಕಳ್ಳಸಾಗಣೆ ಮತ್ತು ದೌರ್ಜನ್ಯ ಪ್ರಕರಣಗಳು ಹಳ್ಳ ಹಿಡಿಯುತ್ತಿವೆ ಎಂದು ಆಪಾದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ