ಆ್ಯಪ್ನಗರ

ಬೆಳಗಾವಿ ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರಭಾಕರ ಕೋರೆ ಆಯ್ಕೆ

ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್‌ ಆಯೋಜಿಸುವ ...

Vijaya Karnataka 23 Feb 2020, 5:00 am
ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್‌ ಆಯೋಜಿಸುವ ಬೆಳಗಾವಿ ಜಿಲ್ಲಾ14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಅವರನ್ನು ಆಯ್ಕೆ ಮಾಡಲಾಗಿದೆ.
Vijaya Karnataka Web prabhakar kore elected as president of belagavi district literary conference
ಬೆಳಗಾವಿ ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರಭಾಕರ ಕೋರೆ ಆಯ್ಕೆ


''ಈ ಬಾರಿಯ ಜಿಲ್ಲಾಸಮ್ಮೇಳನವನ್ನು ಕಾಗವಾಡ ತಾಲೂಕಿನ ಉಗಾರ ಖುದ್‌ರ್‍ನಲ್ಲಿನಡೆಸಲು ನಿರ್ಧರಿಸಲಾಗಿದೆ. ಇನ್ನೂ ದಿನಾಂಕ ನಿಗದಿ ಮಾಡಿಲ್ಲ. ಏಪ್ರಿಲ್‌ 29, 30 ಅಥವಾ ಮೇ ಮೊದಲ ವಾರ ನಡೆಸಲು ನಿರ್ಧರಿಸಲಾಗಿದೆ. ಈ ಕುರಿತು ಶುಕ್ರವಾರ ಸಭೆ ನಡೆಸಲಾಗಿತ್ತು. ಶನಿವಾರ ಸರ್ವಾಧ್ಯಕ್ಷರ ಹೆಸರು ಅಂತಿಮ ಮಾಡಲಾಯಿತು'', ಎಂದು ಕಸಾಪ ಜಿಲ್ಲಾಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್‌ ತಿಳಿಸಿದರು.

''ಡಾ. ಪ್ರಭಾಕರ ಕೋರೆ ಅವರು ಅವರು ನಾಡು, ನುಡಿಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅವರ ಆಯ್ಕೆಯಿಂದ ಕಸಾಪ ಗೌರವ ಇಮ್ಮಡಿಯಾಗಿದೆ'', ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ