ಆ್ಯಪ್ನಗರ

ಬೆಳಗಾವಿಯಲ್ಲಿ ಉಪ ಚುನಾವಣೆ ಟಿಕೆಟ್‌ ಆಕಾಂಕ್ಷಿಗಳ ದಂಡು..! ಕಟೀಲ್‌ ಜೊತೆ‌ ಪ್ರಭಾಕರ್‌ ಕೋರೆ ಚರ್ಚೆ

ಸುರೇಶ್‌ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಈ ಹಿನ್ನೆಲೆ ಟಿಕೆಟ್‌ಗಾಗಿ ಲಾಬಿ ನಡೆಯುತ್ತಿದ್ದು, ಬೆಳಗಾವಿಯಲ್ಲಿ ಆಕಾಂಕ್ಷಿಗಳ ದಂಡು ಬಂದಿದ್ದು, ನಳಿನ್‌ ಕುಮಾರ್‌ ಕಟೀಲ್‌ ಜೊತೆ ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್‌ ಕೋರೆ ಟಿಕೆಟ್‌ಗಾಗಿ ಚರ್ಚೆ ನಡೆಸಿದರು ಎನ್ನಲಾಗಿದೆ.

Vijaya Karnataka Web 17 Jan 2021, 3:02 pm
ಬೆಳಗಾವಿ: ಕೇಂದ್ರ ಸಚಿವ ಸುರೇಶ್‌ ಅಂಗಡಿ ಅವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಶೀಘ್ರದಲ್ಲಿಯೇ ನಡೆಯಲಿದ್ದು, ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಲಾಬಿ ಶುರುವಾಗಿದೆ. ಈ ಹಿನ್ನೆಲೆ ಟಿಕೆಟ್‌ ಆಕಾಂಕ್ಷಿಗಳ ದಂಡು ಬೆಳಗಾವಿಯಲ್ಲಿ ಬಿಜೆಪಿ ವರಿಷ್ಠರ ಭೇಟಿಗೆ ಮುಂದಾಗಿದೆ.
Vijaya Karnataka Web Prabhakar Kore
ಪ್ರಭಾಕರ್‌ ಕೋರೆ, ಬಿಜೆಪಿ ನಾಯಕ (ಸಂಗ್ರಹ ಚಿತ್ರ)


ಉಪಚುನಾವಣೆಯ ಟಿಕೆಟ್‌ ಆಕಾಂಕ್ಷಿಗಳಲ್ಲಿ ಒಬ್ಬರಾಗಿರುವ ಪ್ರಭಾಕರ್‌ ಕೋರೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಳಗಾವಿಯ ಕತ್ತಿ ಒಡೆತನದ ಯುಕೆ 27 ಹೋಟೆಲ್‌ನಲ್ಲಿ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ಲೋಕಸಭೆ ಟಿಕೆಟ್‌ಗೆ ಪ್ರಭಾಕರ್‌ ಕೋರೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಅಮಿತ್ ಶಾ ಆಗಮಿಸುವ ಹಿನ್ನೆಲೆ ಬೆಳಗಾವಿಯಲ್ಲಿ ರಾಜಕೀಯ ಕೂತುಹಲ ಗರಿಗೆದರಿದ್ದು, ಶಾಸಕ‌ ಅರವಿಂದ ಬೆಲ್ಲದ, ಪ್ರಭಾಕರ್ ಕೋರೆ, ಮಹಾಂತೇಶ ಕವಟಗಿಮಠ, ಸಂಜಯ ಪಾಟೀಲ್‌, ಸಿಸಿ ಪಾಟೀಲ್‌, ದುರ್ಯೋದನ ಐಹೊಳೆ ಸೇರಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಜನಸೇವಕ ಸಮಾವೇಶ ಸಮಾರೋಪ: ಬೆಳಗಾವಿಗೆ ಅಮಿತ್ ಶಾ ಆಗಮನ, ಗಣ್ಯರಿಂದ ಸ್ವಾಗತಕಟೀಲ್‌ ಭೇಟಿ ಬಳಿಕ ಮಾತನಾಡಿದ ಪ್ರಭಾಕರ್‌ ಕೋರೆ, ನಾನು ರಾಜಕೀಯದಿಂದ ನಿವೃತ್ತಿ ಆಗಿಲ್ಲ. ಪಕ್ಷ ಅವಕಾಶ ನೀಡಿದರೆ, ಚುನಾವಣೆಗೆ ಸ್ಪರ್ಧಿಸಲು ಸಿದ್ದ ಎಂದು ಹೇಳಿದರು. ಇನ್ನು, ಏಪ್ರಿಲ್‌ ನಂತರ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ‌ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರ ಆರ್‌ಎಸ್‌ಎಸ್ ಬೇರೆ ಇರಬಹುದು ಎಂದು ತಿರುಗೇಟು ನೀಡಿದರು.
ಕೃಷಿ ಮಸೂದೆ ಜಾರಿ ವಿರೋಧ, ಬೆಳಗಾವಿಯಲ್ಲಿ ರೈತರಿಂದ ಅರೆಬೆತ್ತಲೆ ಮೆರವಣಿಗೆ; ಅಮಿತ್ ಶಾ ಗೆ ಗೋ ಬ್ಯಾಕ್!ಮೈಸೂರಿನಲ್ಲಿ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಏಪ್ರಿಲ್‌ ಬಳಿಕ ಬಿಎಸ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗುತ್ತದೆ. ನನಗೆ ಆರ್‌ಎಸ್‌ಎಸ್‌ ಮೂಲಗಳಿಂದ ಮಾಹಿತಿ ಬಂದಿದೆ ಎಂದು ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ