ಆ್ಯಪ್ನಗರ

ಪ್ರಕಾಶ ಹುಕ್ಕೇರಿ ಜೆಡಿಎಸ್‌ ನಿರ್ನಾಮಕ್ಕೆ ಮುಂದಾಗಿದ್ದಾರೆ

ಚಿಕ್ಕೋಡಿ: ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ ಹುಕ್ಕೇರಿಯವರು ಒಬ್ಬ ಮೈತ್ರಿ ಸರಕಾರದ ಅಭ್ಯರ್ಥಿ ಎಂಬುದನ್ನು ...

Vijaya Karnataka 17 Apr 2019, 5:00 am
ಚಿಕ್ಕೋಡಿ : ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ ಹುಕ್ಕೇರಿಯವರು ಒಬ್ಬ ಮೈತ್ರಿ ಸರಕಾರದ ಅಭ್ಯರ್ಥಿ ಎಂಬುದನ್ನು ಮರೆತು ಕೇವಲ ನಾನು ಕಾಂಗ್ರೆಸ್‌ ಪಕ್ಷ ದ ಅಭ್ಯರ್ಥಿ ಎಂದು ಹೇಳುವ ಮೂಲಕ ಜೆಡಿಎಸ್‌ ಪಕ್ಷ ವನ್ನು ನಿರ್ನಾಮ ಮಾಡಲು ಹೊರಟಿದ್ದಾರೆ ಎಂದು ಚಿಕ್ಕೋಡಿ ಜಿಲ್ಲಾ ಜೆಡಿಎಸ್‌ ವಿದ್ಯಾರ್ಥಿ ಘಟಕಾಧ್ಯಕ್ಷ ಕಾಡಗೌಡ ಪಾಟೀಲ ಆಕ್ರೋಶ ವ್ಯಕ್ತ ಪಡಿಸಿದರು.
Vijaya Karnataka Web BEL-16CKD1


ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಪ್ರಕಾಶ ಹುಕ್ಕೇರಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಮಳೆಯಾಶ್ರಿತ ಪ್ರದೇಶದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸುವ ಸಲುವಾಗಿ ಕರಗಾಂವ ಮತ್ತು ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಯನ್ನು ಲೋಕಸಭೆ ಚುನಾವಣೆ ಮುಗಿದ ಕೂಡಲೇ ಅನುಷ್ಠಾನಗೊಳಿಸುವುದಾಗಿ ಮತ್ತು ಜನರ ಹಿತದೃಷ್ಟಿಯಿಂದ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿಸುವುದಾಗಿ ಭರವಸೆ ನೀಡಿ ಹೋದವರು ಐದು ವರ್ಷ ಕಳೆದರೂ ಇತ್ತ ಇಣುಕಿ ಸಹ ನೋಡಿಲ್ಲ ಎಂದರು.

ಈಗ ಮತ್ತೆ ಮರಳಿ ಮತ ಕೇಳಲು ಮಾತ್ರ ಬರುತ್ತಿದ್ದು, ಹೀಗಾಗಿ ಮಡ್ಡಿ ಭಾಗದ ರೈತರು ಪ್ರಸಕ್ತ ಚುನಾವಣೆಯಲ್ಲಿ ಸುಳ್ಳು ಹೇಳಿ ಮತಪಡೆದು ಜನರಿಗೆ ಮೋಸ ಮಾಡಿ ಹೋಗಿರುವ ಅವರಿಗೆ ತಕ್ಕ ಪಾಠ ಕಲಿಸಲು ಸಿದ್ಧರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಪಕ್ಷ ದ ಅಭ್ಯರ್ಥಿಯಾಗಿರುವ ಪ್ರಕಾಶ ಹುಕ್ಕೇರಿಯವರು ಪ್ರಚಾರ ಸಭೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷ ದ ಶಾಲುಗಳನ್ನು ಜತೆಯಾಗಿ ಬಳಸುತ್ತಿಲ್ಲ. ಏ. 19 ರಂದು ಚಿಕ್ಕೋಡಿಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಆಗಮಿಸುತ್ತಿರುವ ವಿಷಯವನ್ನು ಸಹ ಜೆಡಿಎಸ್‌ ಮುಖಂಡರು ಮತ್ತು ಕಾರ್ಯಕರ್ತರಿಗೆ ತಿಳಿಸಿಲ್ಲ. ಆ ವಿಷಯದಲ್ಲಿಯೂ ಸಹ ಜೆಡಿಎಸ್‌ ಪಕ್ಷ ದವರನ್ನು ಸಹ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಚಿಕ್ಕೋಡಿ ಜಿಲ್ಲಾ ಜೆಡಿಎಸ್‌ ಕಾರ್ಯಕರ್ತರು ಮತ್ತು ಮುಖಂಡರಿಗೆ ಅಸಮಾಧಾನವಾಗಿದೆ ಎಂದರು.

ಇನ್ನೂ ಕಾಲ ಮಿಂಚಿಲ್ಲ. ಈಗಲಾದರೂ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಎಚ್ಚೆತ್ತುಕೊಳ್ಳಬೇಕು. ಜೆಡಿಎಸ್‌ನ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನುಗ್ಗಿದರೆ ಮಾತ್ರ ಕಾಂಗ್ರೆಸ್‌ ಪಕ್ಷ ಕ್ಕೆ ಗೆಲುವು ಇದೆ. ಇಲ್ಲವಾದರೆ ಕಾಂಗ್ರೆಸ್‌ ಪಕ್ಷ ದ ಅಭ್ಯರ್ಥಿ ಹೀನಾಯ ಸೋಲು ಅನುಭವಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ