ಆ್ಯಪ್ನಗರ

ಮಂಗನ ಕಾಯಿಲೆ ತಡೆಗೆ ಮುಂಜಾಗ್ರತಾ ಕ್ರಮ

ಬೆಳಗಾವಿ : ಖಾನಾಪುರ ತಾಲೂಕು ಕಣಕುಂಬಿ ವ್ಯಾಪ್ತಿಯಲ್ಲಿ 2016ರಲ್ಲಿ ಮಂಗನ ಕಾಯಿಲೆ ಕಂಡು ಬಂದ ಹಿನ್ನೆಲೆಯಲ್ಲಿ ...

Vijaya Karnataka 8 Feb 2019, 5:00 am
ಬೆಳಗಾವಿ : ಖಾನಾಪುರ ತಾಲೂಕು ಕಣಕುಂಬಿ ವ್ಯಾಪ್ತಿಯಲ್ಲಿ 2016ರಲ್ಲಿ ಮಂಗನ ಕಾಯಿಲೆ ಕಂಡು ಬಂದ ಹಿನ್ನೆಲೆಯಲ್ಲಿ ಈ ಬಾರಿ ಮುಂಜಾಗ್ರತಾ ಕ್ರಮವಾಗಿ ಕಾಯಿಲೆಗೆ ನಿಗದಿಪಡಿಸಿದ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಸಮೀಕ್ಷ ಣಾಧಿಕಾರಿ ಡಾ. ಬಿ.ಎನ್‌. ತುಕ್ಕಾರ ಹೇಳಿದರು.
Vijaya Karnataka Web BEL-7 LBS 3


ಖಾನಾಪುರ ಪಟ್ಟಣದಲ್ಲಿ ಮಂಗನ ಕಾಯಿಲೆ ಕುರಿತು ಆರೋಗ್ಯ, ಶಿಕ್ಷ ಣ, ಕೃಷಿ, ಅರಣ್ಯ, ತಾಪಂ, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಈ ಬಾರಿ ಮಲೆನಾಡಿನ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿ ಹರಡುತ್ತಿದೆ. ಖಾನಾಪುರ ತಾಲೂಕಿನಲ್ಲಿ ಮಂಗನ ಕಾಯಿಲೆ ಬರದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ. ಇಲ್ಲಿವರೆಗೂ ಖಾನಾಪುರ ತಾಲೂಕಿನಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಆದರೂ ಮಂಗನ ಕಾಯಿಲೆಗೆ ಬೇಕಾಗುವ ಲಸಿಕೆಯನ್ನು ಖಾನಾಪುರ ತಾಲೂಕಿನ ಹಲಸಿ, ಅಶೋಕ ನಗರ, ಕಣಕುಂಬಿ, ಲೋಂಡಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡಲಾಗುತ್ತಿದೆ ಎಂದರು.

ಸತತ ಹತ್ತು ದಿನಗಳವರೆಗೆ ಜ್ವರ, ತಲೆನೋವು, ಸೊಂಟ ನೋವು, ಕೈಕಾಲು ನೋವು, ನಿಶಕ್ತಿ, ಕಣ್ಣು ಕೆಂಪಾಗುವುದು, ಮೆದುಳಿನ ಹೊದಿಕೆಯ ಜ್ವರದ ಲಕ್ಷ ಣಗಳು ಕಂಡು ಬಂದರೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಂಪರ್ಕಿಸುವಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ಮಂಗನ ಕಾಯಿಲೆಯ ಕುರಿತು ಜಾಗೃತಿ ಮೂಡಿಸುವ ಕರ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ತಹಸೀಲ್ದಾರ ಶಿವಾನಂದ ಉಳ್ಳೇಗಡ್ಡಿ, ನಿಯಂತ್ರಣಾಧಿಕಾರಿ ಡಾ. ಎಂ.ಎಸ್‌.ಪಲ್ಲೇದ, ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜೀವ ನಾಂದ್ರೆ, ಆರ್‌ಎಫ್‌ಒಗಳಾದ ಬಸವರಾಜ ವಾಳದ, ರತ್ನಾಕರ ಸೈಬನ್ನವರ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ