ಆ್ಯಪ್ನಗರ

ಶಿಕ್ಷ ಣ ಕ್ಷೇತ್ರದ ಸುಧಾರಣೆಗೆ ಪ್ರಥಮ ಆದ್ಯತೆ

ರಾಮದುರ್ಗ: ಶಿಕ್ಷ ಣದಿಂದಲೇ ದೇಶದ ಪ್ರಗತಿ ಸಾಧ್ಯ...

Vijaya Karnataka 27 Jan 2019, 5:00 am
ರಾಮದುರ್ಗ : ಶಿಕ್ಷ ಣದಿಂದಲೇ ದೇಶದ ಪ್ರಗತಿ ಸಾಧ್ಯ. ಈ ನಿಟ್ಟಿನಲ್ಲಿ ತಾಲೂಕಿನಲ್ಲಿ ಶಿಕ್ಷ ಣ ಸುಧಾರಣೆಗೆ ಪ್ರಥಮ ಆದ್ಯತೆ ನೀಡಿ ಎಲ್ಲರಿಗೂ ಸಮಾನ ಶಿಕ್ಷ ಣ ಸೌಲಭ್ಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
Vijaya Karnataka Web BEL-26RD4


ಪಟ್ಟಣದ ತೇರಬಜಾರದಲ್ಲಿ ಶನಿವಾರ 70ನೇ ಗಣರಾಜ್ಯೋತ್ಸವದ ನಿಮಿತ್ತ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶದಲ್ಲಿ ಭಯೋತ್ಪಾದನೆ, ಭ್ರಷ್ಟಾಚಾರ, ಕೊಲೆ, ಸುಲಿಗೆ, ದರೋಡೆ ನಿಗ್ರಹಿಸಲು ಯುವಕರು ಜಾಗೃತರಾದರೆ ಸದೃಢ ರಾಷ್ಟ್ರ ನಿರ್ಮಾಣವಾಗಲಿದೆ ಎಂದರು.

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ 20.84 ಕೋಟಿ ರೂ. ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ 23 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿ ಮಾಡಿಸಲಾಗುತ್ತಿದೆ. ಸಣ್ಣ ನೀರಾವರಿ ಇಲಾಖೆಯಿಂದ ಗೊಡಚಿ ಹತ್ತಿರದ ಹಳ್ಳಕ್ಕೆ 1.40 ಕೋಟಿ ರೂ. ವೆಚ್ಚದಲ್ಲಿ ಬ್ರಿಜ್‌ ಕಂ ಬ್ಯಾರೇಜ್‌ ಹಾಗೂ ಉಜ್ಜೇನಕೊಪ್ಪ ಹತ್ತಿರದ ಹಳ್ಳಕ್ಕೆ 1.90 ಕೋಟಿ ರೂ. ವೆಚ್ಚದಲ್ಲಿ ಬ್ರಿಜ್‌ ಕಂ ಬ್ಯಾರೇಜ್‌ ನಿರ್ಮಿಸಲಾಗುತ್ತಿದೆ. ತಾಲೂಕಿನ ಬರ ನಿರ್ವಹಣೆಗೆ 1 ಕೋಟಿ ರೂ. ಅನುದಾನದ ಕಾಮಗಾರಿಗಳಿಗೆ ಟೆಂಡರ್‌ ಕರೆಯಲಾಗಿದೆ. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ತಹಸೀಲ್ದಾರ ಬಸನಗೌಡ ಕೋಟೂರ ಅರಮನೆ ಆವರಣದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ, ಭವಿಷ್ಯದಲ್ಲಿ ಒಳ್ಳೆಯ ನಾಗರಿಕರ ಅಗತ್ಯವಿದ್ದು, ದಾರಿ ತಪ್ಪುತ್ತಿರುವ ಯುವ ಜನಾಂಗವನ್ನು ಸನ್ಮಾರ್ಗಕ್ಕೆ ತರುವ ಪ್ರಯತ್ನ ಮಾಡಬೇಕಿದೆ. ಪವಿತ್ರವಾದ ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು ಎಂದರು.

ತಾಪಂ ಇಒ ಎ.ಜಿ. ಪಾಟೀಲ, ಗ್ರೇಡ್‌-2 ತಹಸೀಲ್ದಾರ ವಿಜಯಕುಮಾರ ಕಡಕೋಳ, ಡಿವೈಎಸ್‌ಪಿ ಎಸ್‌.ಬಿ. ಪಾಟೀಲ, ಸಿಡಿಪಿಒ ಖಾದರಬೀ ಲಕ್ಷ್ಮೇಶ್ವರ, ಹಿಂದುಳಿದ ವರ್ಗಗಳ ಇಲಾಖೆಯ ಎಂ.ಆರ್‌. ಕದಮ್‌, ಪುರಸಭೆಯ ಸದಸ್ಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಪಟ್ಟಣದ ಅರಮನೆ ಆವರಣದಲ್ಲಿ ಪೊಲೀಸ್‌, ಗೃಹ ರಕ್ಷ ಕದಳ, ಎನ್‌ಸಿಸಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ