ಆ್ಯಪ್ನಗರ

ಎಲ್ಲ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ

ಇಂಗಳಿ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಎಲ್ಲ ನೀರಾವರಿ ಯೋಜನೆಗಳ ಅನುಷ್ಠಾನದ ಜತೆಗೆ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಕಾರ್ಯಕ್ಕೆ ಹೆಚ್ಚಿನ ...

Vijaya Karnataka 26 Jun 2019, 5:00 am
ಇಂಗಳಿ : ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಎಲ್ಲ ನೀರಾವರಿ ಯೋಜನೆಗಳ ಅನುಷ್ಠಾನದ ಜತೆಗೆ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದೆಂದು ಚಿಕ್ಕೋಡಿಯ ನೂತನ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
Vijaya Karnataka Web BEL-25INGALI4


ಅವರು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಶಿವಾಲಯದಲ್ಲಿ ನಡೆದ ಸನ್ಮಾನ ಗ್ರಾಮಸ್ಥರ ಸ್ವೀಕರಿಸಿ ಮಾತನಾಡಿದರು. ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಅಧ್ಯಕ್ಷ ತೆ ವಹಿಸಿದ್ದರು. ಅತಿಥಿಯಾಗಿ ವಿಧಾನ ಪರಿಷತ್ತಿನ ಸದಸ್ಯ ಮಹಾಂತೇಶ ಕವಟಗಿಮಠ ಭಾಗವಹಿಸಿದ್ದರು.

ಈ ವೇಳೆ ಅಣ್ಣಾಸಾಹೇಬ ಜೊಲ್ಲೆಯವರನ್ನು ಅಂಕಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೃಷ್ಣಾಬಾಯಿ ಚೌಧರಿ, ಸದಸ್ಯರಾದ ತುಕಾರಾಮ ಪಾಟೀಲ, ಪಿಂಟು ಹಿರೆಕುರಬರ, ಪ್ರಭಾಕರ ಶಿಂಧೆ, ಸುರೇಶ ಪಾಟೀಲ, ವಿವೇಕ ಕಮತೆ ಸನ್ಮಾನಿಸಿದರು.

ತಮ್ಮಣ್ಣಿ ಗುಂಡಕಲ್ಲೆ, ಧೂಧಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾದ ಮಲ್ಲಿಕಾರ್ಜುನ ಕೋರೆ, ಭರತೇಶ ಬನವಣೆ, ತಾತ್ಯಾಸಾಹೇಬ ಕಾಟೆ, ಮಲ್ಲಪ್ಪ ಮೈಶಾಳೆ, ಅಣ್ಣಸಾಹೇಬ ಪಾಟೀಲ, ಅಜಿತ್‌ರಾವ ದೇಸಾಯಿ, ರಾಮಚಂದ್ರ ನಿಶಾನದಾರ, ಮಹಾವೀರ ಪಾಟೀಲ, ಉಪಾಧ್ಯಕ್ಷ ಸಂದೀಪ ಪಾಟೀಲ, ನಂದಕುಮಾರ ನಾಶಿಪುಡಿ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ