ಆ್ಯಪ್ನಗರ

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬಹುಮಾನ

ಬೆಳಗಾವಿ: 'ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣ' ವಿಷಯದ ಮೇಲೆ ದಿಲ್ಲಿಯಲ್ಲಿ ಈಚೆಗೆ ಆಯೋಜಿಸಿದ್ದ ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕರ್ನಾಟಕವನ್ನು ...

Vijaya Karnataka 1 Feb 2019, 5:00 am
ಬೆಳಗಾವಿ : 'ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣ' ವಿಷಯದ ಮೇಲೆ ದಿಲ್ಲಿಯಲ್ಲಿ ಈಚೆಗೆ ಆಯೋಜಿಸಿದ್ದ ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ನಗರದ ಜೆಎನ್‌ಎಂಸಿಯ ಅಂತಿಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಪ್ರಣವ್‌ ಅಧ್ಯಾಪಕ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
Vijaya Karnataka Web BLG-3101-2-52-31RAJU-9


ಪ್ರಣವ್‌ಗೆ ಕೇಂದ್ರ ಯುವಜನ ಕಲ್ಯಾಣ ಮತ್ತು ಕ್ರೀಡಾ ಇಲಾಖೆಯ ಕಾರ‍್ಯದರ್ಶಿ ಉಪಮಾ ಚೌಧರಿ 50 ಸಾವಿರ ರೂ. ನಗದು, ಸ್ಮರಣಿಕೆ ಮತ್ತು ಪ್ರಮಾಣ ಪತ್ರ ನೀಡಿ ಸತ್ಕರಿಸಿದ್ದಾರೆ.

ಈ ಸ್ಪರ್ಧೆಯಲ್ಲಿ ಆಯಾ ರಾಜ್ಯಗಳಲ್ಲಿ ಪ್ರಥಮ ಸ್ಥಾನ ಪಡೆದ 29 ಸ್ಪರ್ಧಾಳುಗಳು ಭಾಗವಹಿಸಿದ್ದರು. ಪ್ರತಿಭಾವಂತ ವಿದ್ಯಾರ್ಥಿಯಾಗಿರುವ ಪ್ರಣವ್‌ ರಾಷ್ಟ್ರಮಟ್ಟದ ಅನೇಕ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ, ಪ್ರಮಾಣಪತ್ರಗಳನ್ನು ಗಳಿಸಿದ್ದಾರೆ. ಈ ಸ್ಪರ್ಧೆಯನ್ನು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಸಂಯುಕ್ತವಾಗಿ ಆಯೋಜನೆ ಮಾಡಿದ್ದವು. ಪ್ರಣವ್‌ ಹಿರಿಯ ಪತ್ರಕರ್ತ ವಿಲಾಸ ಅಧ್ಯಾಪಕ ಅವರ ಪುತ್ರ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ