ಆ್ಯಪ್ನಗರ

ಹಿಂದೂಗಳ ಹತ್ಯೆ ಖಂಡಿಸಿ ಪ್ರತಿಭಟನೆ

ಬೈಲಹೊಂಗಲ: ದೇಶ ವಿರೋಧಿ ಶಕ್ತಿಗಳು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ...

Vijaya Karnataka 19 Oct 2019, 5:00 am
ಬೈಲಹೊಂಗಲ: ದೇಶ ವಿರೋಧಿ ಶಕ್ತಿಗಳು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿಆರ್‌ಎಸ್‌ಎಸ್‌ನ ಬಂಡುಪ್ರಕಾಶ ಪಾಲ ಮತ್ತು ಅವರ ಕುಟುಂಬದವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಶ್ರೀರಾಮ ಸೇನಾ ಹಿಂದೂಸ್ತಾನ ಸಂಘಟನೆ ವತಿಯಿಂದ ಪಟ್ಟಣದಲ್ಲಿಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಉಪವಿಭಾಗಾಧಿಕಾರಿ ಮೂಲಕ ಪ್ರಧಾನ ಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web 18HTP5_53


ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ಸಮಾಧಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ರಾಯಣ್ಣ ಸರ್ಕಲ್‌, ಮುರಗೋಡ ರಸ್ತೆ ಮತ್ತಿತರ ಪ್ರಮುಖ ಬೀದಿಗಳಲ್ಲಿಸಂಚರಿಸಿ ಉಪವಿಭಾಗಾಧಿಕಾರಿ ಕಚೇರಿ ತಲುಪಿತು. ದಾರಿಯುದ್ದಕ್ಕೂ ದೇಶದ್ರೋಹಿಗಳಿಗೆ ಧಿಕ್ಕಾರ ಎಂಬ ಘೋಷಣೆ ಮೊಳಗಿದವು.

ಸಂಘಟನೆಯ ತಾಲೂಕಾಧ್ಯಕ್ಷ ಸಾಯಿರಾಮ ಜಂಬಗಿ, ಉಪಾಧ್ಯಕ್ಷ ಮಂಜುನಾಥ ಜಾದವ, ಕುಮಾರ ಹೂಗಾರ ಮಾತನಾಡಿ, ಹಿಂದೂ ಕುಟುಂಬದವರನ್ನು ಹತ್ಯೆ ಮಾಡಿದ ದೇಶ ವಿರೋಧಿಗಳನ್ನು ತಕ್ಷಣ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು. ದೇಶಾಭಿಮಾನ ವಿಷಯ ಬಂದಾಗ ಪಕ್ಷ ಬೇಧ ಮರೆತು ತಪ್ಪಿತಸ್ಥರ ಶಿಕ್ಷೆಗೆ ಬೆಂಬಲ ಸೂಚಿಸಬೇಕು. ತಕ್ಷಣ ಆರೋಪಿಗಳನ್ನು ಬಂಧಿಸದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಉಮೇಶ ಗಂಗಪ್ಪನವರ, ಪ್ರಜ್ವಲ ಹೂಗಾರ, ಮಂಜು ಆದರಗಿ, ವಿಜಯ ಪೂಜೇರಿ, ಗಂಗಾಧರ ತೋರಣಗಟ್ಟಿ, ಹರೀಶ ಕೋಲಕಾರ, ಗಂಗಪ್ಪ ವಣ್ಣೂರ, ನಿಂಗರಾಜ ಕೋಲಕಾರ, ರಾಘು ಅರವಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ