ಆ್ಯಪ್ನಗರ

ರಾಯಣ್ಣ ನಾಮಫಲಕ ತೆರವು ಖಂಡಿಸಿ ಪ್ರತಿಭಟನೆ

ಬೆಳಗಾವಿ: ಸಂಗೊಳ್ಳಿ ರಾಯಣ್ಣ ರಸ್ತೆ ನಾಮಫಲಕ ತೆಗೆದು ಅದನ್ನು ಕಸದಲ್ಲಿ ಹಾಕಿರುವುದನ್ನು ಖಂಡಿಸಿ ಗುರುವಾರ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಜಿಲ್ಲಾಧಿಕಾರಿ ...

Vijaya Karnataka 12 Oct 2018, 5:00 am
ಬೆಳಗಾವಿ:ಸಂಗೊಳ್ಳಿ ರಾಯಣ್ಣ ರಸ್ತೆ ನಾಮಫಲಕ ತೆಗೆದು ಅದನ್ನು ಕಸದಲ್ಲಿ ಹಾಕಿರುವುದನ್ನು ಖಂಡಿಸಿ ಗುರುವಾರ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಜಿಲ್ಲಾಧಿಕಾರಿ ಕಚೇರಿಯ ಕೊಠಡಿ ಎದುರು ಏಕಾಂಗಿಯಾಗಿ ಪ್ರತಿಭಟಿಸಿದರು.
Vijaya Karnataka Web BEL-11 LBS 4


ಜಿಲ್ಲಾಧಿಕಾರಿ ಕಚೇರಿ ಎದುರಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚನ್ನಮ್ಮ ವೃತ್ತದ ವರೆಗೆ ಸಂಗೊಳ್ಳಿ ರಾಯಣ್ಣ ರಸ್ತೆ ಎಂದು ನಾಮಕರಣ ಮಾಡಿ ನಾಮಫಲಕ ಅಳವಡಿಸಲಾಗಿತ್ತು. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಗೊಳ್ಳಿ ರಾಯಣ್ಣ ರಸ್ತೆ ನಾಮ ಫಲಕ ತೆಗೆದು ಅಲ್ಲಿ, ಕೋರ್ಟ್‌ ರಸ್ತೆ ಎಂದು ನಾಮಫಲಕ ಹಾಕಲಾಗಿದೆ ಎಂದು ಅಶೋಕ ಚಂದರಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರಿನ ಅಂಡರ್‌ ಪಾಸ್‌ ಬಳಿ ಎಸೆದಿದ್ದ ನಾಮಫಲಕ ಹಿಡಿದುಕೊಂಡು ಜಿಲ್ಲಾಧಿಕಾರಿ ಕೊಠಡಿ ಎದುರು ಕೆಲಹೊತ್ತು ಪ್ರತಿಭಟಿಸಿ, ಸಂಬಂಧಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ