ಆ್ಯಪ್ನಗರ

ಡಿ.ಕೆ.ಶಿವಕುಮಾರ ಬಂಧನ ಖಂಡಿಸಿ ಪ್ರತಿಭಟನೆ

ಮೂಡಲಗಿ: ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ಡಿಕೆ...

Vijaya Karnataka 9 Sep 2019, 5:00 am
ಮೂಡಲಗಿ: ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ಡಿ.ಕೆ. ಶಿವಕುಮಾರ ಬಂಧನ ಖಂಡಿಸಿ ಕೌಜಲಗಿ ಹಾಗೂ ಅರಬಾವಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
Vijaya Karnataka Web 8MDL1_53


ಮೂಡಲಗಿಯ ಕಲ್ಮೇಶ್ವರ ವೃತ್ತದಿಂದ ತಹಸೀಲ್ದಾರ್‌ ಕಚೇರಿವರೆಗೆ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅರಬಾವಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗುರುರಾಜ ಪೂಜೇರ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರವು ಸಾಂವಿಧಾನಿಕ ಸಂಸ್ಥೆಗಳಾದ ಸಿಬಿಐ, ಐಟಿ ಮತ್ತು ಇಡಿ ಗಳನ್ನು ದುರ್ಬಳಕೆ ಮಾಡಿಕೊಂಡು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡರಾದ ಡಿ.ಕೆ. ಶಿವಕುಮಾರ ಅವರನ್ನು ಬಂಧಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದರು.

ಕಾಂಗ್ರೆಸ್‌ ಮುಖಂಡ ವಿ.ಪಿ. ನಾಯಿಕ ಮಾತನಾಡಿ, ಡಿ.ಕೆ. ಶಿವಕುಮಾರ ಅವರು ವಿಚಾರಣೆ ವೇಳೆ ತನಿಖಾ ಸಂಸ್ಥೆಗಳೊಂದಿಗೆ ಸಂಪೂರ್ಣ ಸಹಕಾರ ನೀಡಿದರೂ ಅವರನ್ನು ಬಂಧಿಸಿರುವ ಕ್ರಮ ಸರಿಯಲ್ಲಎಂದರು.

ಪ್ರತಿಭಟನೆಯಲ್ಲಿಕೌಜಲಗಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಲಗಮಣ್ಣ ಕಳಸಣ್ಣವರ, ಮಾಳಪ್ಪ ಬಿದರಿ, ಅರಬಾವಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಲೀಮ ಇನಾಮದಾರ, ಮುಖಂಡರಾದ ರವೀಂದ್ರ ತುಪ್ಪದ, ಸುರೇಶ ಮಗದುಮ್‌, ಕೌಜಲಗಿ ಬ್ಲಾಕ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮಾಮ ಹುನ್ನೂರ, ಚನ್ನಯ್ಯಸ್ವಾಮಿ ಹಿರೇಮಠ, ಲಕ್ಷತ್ರ್ಮಣ ಅಲಕನೂರ, ಚಂದ್ರು ನಾಯಿಂಗ್ಲಜ, ಮಲಿಕ ಕಳ್ಳಿಮನಿ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ