ಆ್ಯಪ್ನಗರ

ನಿಯಮಾನುಸಾರ ಚುನಾವಣೆಗೆ ಒತ್ತಾಯಿಸಿ ಪ್ರತಿಭಟನೆ

ಬೆಳಗಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ...

Vijaya Karnataka 24 Jan 2020, 5:00 am
ಬೆಳಗಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ನಿಯಮಾನುಸಾರ ಮಾಡುವಂತೆ ಒತ್ತಾಯಿಸಿ ಗುರುವಾರ ಮೂಡಲಗಿ ಪಿಕೆಪಿಎಸ್‌ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
Vijaya Karnataka Web 23LBS2_53
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ನಿಯಮಾನುಸಾರ ಮಾಡುವಂತೆ ಒತ್ತಾಯಿಸಿ ಮೂಡಲಗಿ ಪಿಕೆಪಿಎಸ್‌ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.


ಮೂಡಲಗಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ನಡೆಯುತ್ತಿದೆ. ಆದರೆ, ಕೆಲವರು ರಾಜಕೀಯ ದುರುದ್ದೇಶದಿಂದ ಚುನಾವಣೆ ನಡೆಸಲು ಅಡ್ಡಿಪಡಿಸುತ್ತಿದ್ದಾರೆ. ಹಾಗಾಗಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಾಜಕೀಯ ಒತ್ತಡಕ್ಕೆ ಮಣಿಯದೆ ಚುನಾವಣೆ ನಡೆಸಬೇಕು. ಅಡ್ಡಿಪಡಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿಆಗ್ರಹಿಸಿದರು.

ಸಂಘದ ಸದಸ್ಯರಾದ ಸತೋಷ ಸೋನವಾಲಕರ್‌, ಸಂದೀಪ ಪಿ.ಎಸ್‌., ಬಸಯ್ಯ ಮಠಪತಿ, ಸುಭಾಷ ಕಡಕಬಾವಿ, ರಾಜು ಬೆಳಸಿ, ಅಡಿವೆಪ್ಪ ಕುರಬಗಟ್ಟಿ, ಶಂಕರಪ್ಪ ಹೊಸಕೊಟೆ, ಗುರಲಿಂಗ ಗೋಕಾಕ, ರುದ್ರಪ್ಪ ಬಳಿಗಾರ ಭೀಮಶಿ ತಳವಾರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ