ಆ್ಯಪ್ನಗರ

ಸೇವೆ ಕಾಯಂ ಮಾಡಲು ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಸೇವೆ ಕಾಯಂಗೊಳಿಸುವುದು ಸೇರಿದಂತೆ ...

Vijaya Karnataka 14 Jan 2020, 5:00 am
ಬೆಳಗಾವಿ: ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ರಾಜ್ಯ ಸರಕಾರಿ ದಿನಗೂಲಿ ನೌಕರರ ಮಹಾಮಂಡಳದ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ರವಾನಿಸಿದರು.
Vijaya Karnataka Web 13LBS5_53
ಬೆಳಗಾವಿಯಲ್ಲಿವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರಕಾರಿ ದಿನಗೂಲಿ ನೌಕರರ ಮಹಾಮಂಡಲದ ಸದಸ್ಯರು ಪ್ರತಿಭಟನೆ ನಡೆಸಿದರು.


ಸರಕಾರದ ಇಲಾಖೆಗಳು, ನಿಗಮಗಳಲ್ಲಿಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರ ಸೇವೆ ಕಾಯಂಗೊಳಿಸುತ್ತಿಲ್ಲ. ಅನೇಕ ನೌಕರರಿಗೆ ಕನಿಷ್ಠ ವೇತನ ಕೂಡ ಸಿಗುತ್ತಿಲ್ಲ. ಜತೆಗೆ ಪ್ರತಿ ನೌಕರನಿಗೆ ನೀಡಲಾಗುವ ವೇತನದ ಮೇಲೆ ಶೇ.18 ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಸರಿಯಾದ ಸಮಯದಲ್ಲಿವೇತನ ಪಾವತಿಸುತ್ತಿಲ್ಲ. ಐದಾರು ತಿಂಗಳವರೆಗೆ ವೇತನ ಬಾಕಿ ಉಳಿಯುತ್ತಿದೆ. ಆದರೆ, ಸರಕಾರ ನೌಕರರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲಎಂದು ಆಕ್ರೋಶ ವ್ಯಕ್ತಪಡಿಸಿದರು.

10 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ನೌಕರರನ್ನು ಕಾಯಂಗೊಳಿಸಬೇಕು. ಸರಕಾರಿ ನೌಕರರಿಗೆ ಸಿಗುವ ಎಲ್ಲರೀತಿಯ ಸೌಲಭ್ಯ ಒದಗಿಸಬೇಕು. ಇಲ್ಲದಿದ್ದರೆ ಅಧಿವೇಶನ ಸಂದರ್ಭದಲ್ಲಿಬೆಂಗಳೂರಿನಲ್ಲಿಮಾ.11 ರಿಂದ ಮೂರು ದಿನಗಳ ಕಾಲ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಮಹಾಮಂಡಳದ ಅಧ್ಯಕ್ಷ ಡಾ.ಕೆ.ಎಸ್‌. ಶರ್ಮಾ, ವಿ.ಜಿ. ಸೊಪ್ಪಿನಮಠ, ರಮೇಶ ಕಾತರಕಿ, ಯಲ್ಲಪ್ಪ ಚನ್ನನವರ, ಐ.ಎಂ. ಸನದಿ, ಪ್ರಕಾಶ ಗಡ್ಡಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ