ಆ್ಯಪ್ನಗರ

ಸೇತುವೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ

ಬೆಳಗಾವಿ: ತಾಲೂಕಿನ ಕಂಗ್ರಾಳಿ ಕೆಎಚ್‌...

Vijaya Karnataka 16 Jul 2019, 5:00 am
ಬೆಳಗಾವಿ : ತಾಲೂಕಿನ ಕಂಗ್ರಾಳಿ ಕೆ.ಎಚ್‌. ಗ್ರಾಮದ ಮಾರ್ಕಂಡೆಯ ನದಿ ಸೇತುವೆ ಮತ್ತು ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ಸೋಮವಾರ ಬಿಜೆಪಿ ಮುಖಂಡ ಮಾರುತಿ ಅಷ್ಠಗಿ ನೇತೃತ್ವದಲ್ಲಿ ಸ್ಥಳೀಯರು ಎಪಿಎಂಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
Vijaya Karnataka Web BEL-15 LBS 17


ಅಗಸಗಿ, ಕಡೋಲಿ ಸೇರಿದಂತೆ ಹತ್ತಾರು ಗ್ರಾಮಸ್ಥರು ಈ ಸೇತುವೆ ಮೂಲಕ ಸಂಚರಿಸಬೇಕು. ಆದರೆ, ಅಧಿಕಾರಿಗಳು ರಸ್ತೆ ಮತ್ತು ಸೇತುವೆ ದುರಸ್ತಿಗೆ ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಗಳು ಮತ್ತು ಸೇತುವೆ ದುರಸ್ತಿಗೆ ಮಾಡುವಂತೆ ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕಾರಣ ಜಿಲ್ಲಾಧಿಕಾರಿಗಳು ಕೂಡಲೇ ದುರಸ್ತಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ಲಗಮಣ್ಣಾ ಸನದಿ, ರಮೇಶ ಕಟಾಂಬಳೆ, ಶಂಕರ ಮೆಣಸೆ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ