ಬೆಳಗಾವಿ : ಅತಿಕ್ರಮಣ ಮಾಡಲಾದ ರಸ್ತೆ ತೆರವುಗೊಳಿಸುವಂತೆ ಒತ್ತಾಯಿಸಿ ಶುಕ್ರವಾರ ಅಂಬೇವಾಡಿ ಗ್ರಾಮ ಪಂಚಾಯಿತಿ ಸದಸ್ಯರ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಅಂಬೇವಾಡಿ ಗ್ರಾಪಂ ವ್ಯಾಪ್ತಿಯಲ್ಲಿನ ಮಣ್ಣೂರ, ಗೋಜಗೆ, ಅತವಾಡ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅತಿಕ್ರಮಣ ಮಾಡಿ, ಬಂದ್ ಮಾಡಲಾಗಿದೆ. ಇದರಿಂದ ಗ್ರಾಮಗಳಿಗೆ, ಜಮೀನುಗಳಿಗೆ ತೆರಳಲು ರಸ್ತೆ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಸ್ತೆ ತೆರವುಗೊಳಿಸುವಂತೆ ಅನೇಕ ಬಾರಿ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಮೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ತಕ್ಷ ಣ ತೆರವುಗೊಳಿಸಿ ಸುಧಾರಣೆ ಮಾಡಬೇಕು. ಇದರಿಂದ ಮೂರೂ ಗ್ರಾಮಗಳ ಜನರಿಗೆ ಅನುಕೂಲವಾಗುತ್ತದೆ. ಆದ್ದರಿಂದ ರಸ್ತಿ ಅತಿಕ್ರಮಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಪ್ಪಾಜಿ ನಾಯಿಕ, ಈಶ್ವರ ಬಾಳೆಕುಂದ್ರಿ, ಸತ್ಯಪ್ಪ ಕಾಕತಕರ್, ಮಲ್ಲಪ್ಪ ಬಾಳೆಕುಂದ್ರಿ, ಸಾಳುಕಾ ಕೊಲ್ಲಾಪುರೆ, ಅಶೋಕ ಚೌಗಲೆ, ಮಧುಕರ ಚೌಗಲೆ, ಮಾರುತಿ ಸಾಂಬ್ರೆಕರ್ ಮತ್ತಿತರರು ಉಪಸ್ಥಿತರಿದ್ದರು.
ಅಂಬೇವಾಡಿ ಗ್ರಾಪಂ ವ್ಯಾಪ್ತಿಯಲ್ಲಿನ ಮಣ್ಣೂರ, ಗೋಜಗೆ, ಅತವಾಡ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅತಿಕ್ರಮಣ ಮಾಡಿ, ಬಂದ್ ಮಾಡಲಾಗಿದೆ. ಇದರಿಂದ ಗ್ರಾಮಗಳಿಗೆ, ಜಮೀನುಗಳಿಗೆ ತೆರಳಲು ರಸ್ತೆ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಸ್ತೆ ತೆರವುಗೊಳಿಸುವಂತೆ ಅನೇಕ ಬಾರಿ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಮೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ತಕ್ಷ ಣ ತೆರವುಗೊಳಿಸಿ ಸುಧಾರಣೆ ಮಾಡಬೇಕು. ಇದರಿಂದ ಮೂರೂ ಗ್ರಾಮಗಳ ಜನರಿಗೆ ಅನುಕೂಲವಾಗುತ್ತದೆ. ಆದ್ದರಿಂದ ರಸ್ತಿ ಅತಿಕ್ರಮಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಪ್ಪಾಜಿ ನಾಯಿಕ, ಈಶ್ವರ ಬಾಳೆಕುಂದ್ರಿ, ಸತ್ಯಪ್ಪ ಕಾಕತಕರ್, ಮಲ್ಲಪ್ಪ ಬಾಳೆಕುಂದ್ರಿ, ಸಾಳುಕಾ ಕೊಲ್ಲಾಪುರೆ, ಅಶೋಕ ಚೌಗಲೆ, ಮಧುಕರ ಚೌಗಲೆ, ಮಾರುತಿ ಸಾಂಬ್ರೆಕರ್ ಮತ್ತಿತರರು ಉಪಸ್ಥಿತರಿದ್ದರು.