ಆ್ಯಪ್ನಗರ

ತೈಲ ಬೆಲೆ ಏರಿಕೆ ಖಂಡಿಸಿ ಚಿಕ್ಕೋಡಿಯಲ್ಲಿ ಜಾತ್ಯತೀತ ಜನತಾದಳದ‌ ಪ್ರತಿಭಟನೆ

ಚಿಕ್ಕೋಡಿ: ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆ ...

Vijaya Karnataka 8 Jul 2020, 5:00 am
ಚಿಕ್ಕೋಡಿ: ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆ ಖಂಡಿಸಿ ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಪ್ರಧಾನ ಮಂತ್ರಿಗೆ ಮಂಗಳವಾರ ಮನವಿ ಸಲ್ಲಿಸಿದರು.
Vijaya Karnataka Web 7CKD1_53
ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆ ಖಂಡಿಸಿ ಜಾತ್ಯತೀತ ಜನತಾದಳದ ಕಾರ್ಯಕರ್ತರು ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಪ್ರಧಾನ ಮಂತ್ರಿಗೆ ಮಂಗಳವಾರ ಮನವಿ ಸಲ್ಲಿಸಿದರು.


ಪ್ರವಾಸಿ ಮಂದಿರದಿಂದ ಪಾದಯಾತ್ರೆ ಮೂಲಕ ಮಿನಿ ವಿಧಾನಸೌಧಕ್ಕೆ ತೆರಳಿ ಕೇಂದ್ರ ಸರಕಾರದ ವಿರುದ್ಧ ಘೊಷಣೆಗಳನ್ನು ಕೂಗಿ, ಮನವಿ ಸಲ್ಲಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿಕಚ್ಚಾ ತೈಲದ ಬೆಲೆ ಇಳಿಕೆ ಕಂಡಿದ್ದರೂ ಅದರ ಲಾಭವನ್ನು ಕೇಂದ್ರ ಸರಕಾರ ಜನರಿಗೆ ನೀಡುತ್ತಿಲ್ಲ. ಇದು ಅಗತ್ಯ ವಸ್ತುಗಳ ದರದ ಮೇಲೂ ಪರಿಣಾಮ ಬೀರುತ್ತಿದೆ. ಇದರಿಂದಾಗಿ ಕಡು ಬಡವರ ಜೀವನ ಸಾಗಿಸುವುದು ದುಸ್ತರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಕಳೆದ ವರ್ಷದ ಪ್ರವಾಹದಲ್ಲಿ ಆದ ಮನೆ ಹಾಗೂ ಬೆಳೆ ಹಾನಿ ಪರಿಹಾರ ಹಣವನ್ನು ಕೂಡಲೇ ನೀಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಮನವಿಯಲ್ಲಿಎಚ್ಚರಿಸಿದ್ದಾರೆ. ಮಾಜಿ ಶಾಸಕ ಕಲ್ಲಪ್ಪಣ್ಣಾ ಮಗೆಣ್ಣವರ, ಜೆಡಿಎಸ್‌ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಗಿರೀಶ ಬುಟಾಳೆ, ರಾಜೇಂದ್ರ ಐಹೊಳೆ, ನಿಪ್ಪಾಣಿ ಬ್ಲಾಕ್‌ ಅಧ್ಯಕ್ಷ ಅಣ್ಣಾ ಪಾಟೀಲ, ಬಿ.ಬಿ.ಮುಗಳಿಹಾಳ, ಪ್ರಭಾಕರ ಪಾಟೀಲ, ಅಣ್ಣಾರಾಯ ಹಾಲಹಳ್ಳಿ, ಭಾಗ್ಯಶ್ರೀ ಕದಂ, ಎಂ.ಕೆ.ಪಾಟೀಲ, ಕಾಡಗೌಡ ಪಾಟೀಲ, ಬಸುಗೌಡ ಪಾಟೀಲ, ಜಾಕೀರ್‌ ಜಹಗೀರದಾರ್‌, ಮುದಸ್ಸಿರ್‌ ಆಲಾಲಖಾನ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ