ಆ್ಯಪ್ನಗರ

ಎರಡನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ

ರಾಮದುರ್ಗ: ಕಾರ್ಖಾನೆಗೆ ಕಬ್ಬು ಕಳಿಸಿದ ರೈತರಿಗೆ 305 ರೂ...

Vijaya Karnataka 24 Sep 2018, 5:00 am
ರಾಮದುರ್ಗ: ಕಾರ್ಖಾನೆಗೆ ಕಬ್ಬು ಕಳಿಸಿದ ರೈತರಿಗೆ 305 ರೂ. ಬಾಕಿ ಬಿಲ್‌ ನೀಡುವಂತೆ ಒತ್ತಾಯಿಸಿ ರೈತಪರ ಸಂಘಟನೆಗಳ ನೇತೃತ್ವದಲ್ಲಿ ನೂರಾರು ರೈತರು ತಾಲೂಕಿನ ಖಾನಪೇಟದ ಪ್ಯಾರಿ ಶುಗರ್ಸ್‌ ಎದುರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ.
Vijaya Karnataka Web BEL-23RD1


ಭಾನುವಾರ ಮಧ್ಯಾಹ್ನ ಧನಲಕ್ಷ್ಮೀ ಸಹಕಾರಿ ಕಾರ್ಖಾನೆಯ ಅಧ್ಯಕ್ಷ ಮಹಾದೇವಪ್ಪ ಯಾದವಾಡ ಹಾಗೂ ಇತರ ಆಡಳಿತ ಮಂಡಳಿಯ ಸದಸ್ಯರು ಧರಣಿ ಸ್ಥಳಕ್ಕೆ ಆಗಮಿಸಿ ''ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ. ಕಾರ್ಖಾನೆಯ ಸಾಮಾನ್ಯ ಸಭೆಯಲ್ಲಿ ಕಬ್ಬಿನ ಬಾಕಿ ಬಿಲ್‌ ಬಗ್ಗೆ ಚರ್ಚಿಸಿ ನಿರ್ಧಾರ ಕೈಕೊಳ್ಳಲಾಗುವುದು. ಒಂದು ವೇಳೆ ಬಾಕಿ ಬಿಲ್‌ ಕೊಡಲು ಒಪ್ಪದಿದ್ದರೆ ಕೊಟ್ಟಿರುವ ಲೀಜ್‌ ಹಿಂದಕ್ಕೆ ಪಡೆದುಕೊಳ್ಳುತ್ತೇವೆ,'' ಎಂದು ಭರವಸೆ ನೀಡಿದರು.

ಇದಕ್ಕೆ ಒಪ್ಪದ ಧರಣಿ ನಿರತ ರೈತರು ಸೋಮವಾರ ನಡೆಯುವ ವಾರ್ಷಿಕ ಸಭೆಯು ಈ ಬಗ್ಗೆ ಯಾವ ನಿರ್ಣಯ ಕೈಗೊಳ್ಳುತ್ತದೆ ಎಂದು ನೋಡಿಕೊಂಡು ನಿರ್ಧಾರ ಪ್ರಕಟಿಸುವುದಾಗಿ ಪಟ್ಟು ಹಿಡಿದರು. ಧರಣಿಯನ್ನು ಸೋಮವಾರದವರೆಗೆ ಮುಂದುವರಿಸಲು ನಿರ್ಣಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ