ಆ್ಯಪ್ನಗರ

ಸತೀಶ್‌ ಪರ ಹೆದ್ದಾರಿ ತಡೆದು ಪ್ರತಿಭಟನೆ

ಬೆಳಗಾವಿ: ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್‌ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಮಾನವ ಬಂಧುತ್ವ ವೇದಿಕೆ ನೇತೃತ್ವದಲ್ಲಿ ಪ್ರತಿ ದಿನ ...

Vijaya Karnataka 14 Jun 2018, 5:00 am
ಬೆಳಗಾವಿ: ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್‌ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಮಾನವ ಬಂಧುತ್ವ ವೇದಿಕೆ ನೇತೃತ್ವದಲ್ಲಿ ಪ್ರತಿ ದಿನ ಪ್ರತಿಭಟನೆ ನಡೆಸುತ್ತಿರುವ ಅವರ ಬೆಂಬಲಿಗರು ಬುಧವಾರ ಇಲ್ಲಿನ ಹಲಗಾ ಬಳಿ ರಾಷ್ಟ್ರೀಯ ಹೆದ್ದಾರಿ-4 ತಡೆ ನಡೆಸಿದರು.
Vijaya Karnataka Web BLG-1306-2-52-13PRAMOD3


ಹಲಗಾದಲ್ಲಿರುವ ಸುವರ್ಣ ವಿಧಾನಸೌಧದ ಬಳಿ ಸೇರಿದ ಬೆಂಬಲಿಗರು ಸುಮಾರು 20 ನಿಮಿಷಗಳ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದರು. ಸತೀಶ್‌ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಘೋಷಣೆ ಕೂಗಿ ಗಮನಸೆಳೆದರು.

ಕಳೆದೊಂದು ವಾರದಿಂದ ಜಿಲ್ಲೆಯ ನಾನಾ ಕಡೆ ಸತೀಶ್‌ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ಮಂಗಳವಾರವಷ್ಟೇ ಪಾಲಿಕೆ ಸದಸ್ಯ ದಿನೇಶ ನಾಶಿಪುಡಿ ನೀರಿನ ಟ್ಯಾಂಕರ್‌ನಲ್ಲಿ ಮುಳುಗಿ ಸತೀಶ್‌ ಪರ ಧ್ವನಿ ಎತ್ತಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ