ಆ್ಯಪ್ನಗರ

ನಿವೃತ್ತ ಸೈನಿಕರಿಗೆ ಪುನರ್ವಸತಿ ಕಲ್ಪಿಸಿ

ಬೆಳಗಾವಿ : ವಸತಿ ಯೋಜನೆಗಳಲ್ಲಿ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಮಾಜಿ ಸೈನಿಕರು ಸುವರ್ಣ ಗಾರ್ಡನ್‌ನಲ್ಲಿ ಪ್ರತಿಭಟನೆ ...

Vijaya Karnataka 20 Dec 2018, 5:00 am
ಬೆಳಗಾವಿ : ವಸತಿ ಯೋಜನೆಗಳಲ್ಲಿ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಮಾಜಿ ಸೈನಿಕರು ಸುವರ್ಣ ಗಾರ್ಡನ್‌ನಲ್ಲಿ ಪ್ರತಿಭಟನೆ ನಡೆಸಿದರು.
Vijaya Karnataka Web BEL-19 LBS 1


ದೇಶ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ಸೈನಿಕರಿಗೆ ಅಲ್ಪ ಪಿಂಚಣಿಯಲ್ಲಿ ಜೀವನ ಸಾಗಿಸುವುದು ಕಷ್ಟವಾಗುತ್ತಿದೆ. ನಿವೃತ್ತಿ ಹೊಂದಿದ ಸೈನಿಕರಿಗೆ ಪುನರ್ವಸತಿ ಕಲ್ಪಿಸುವುದು ಹಾಗೂ ನೆಮ್ಮದಿಯ ಜೀವನ ನಡೆಸಲು ಅನುಕೂಲ ಮಾಡಿಕೊಡುವುದು ಸರಕಾರದ ಕರ್ತವ್ಯವಾಗಿದೆ. ಚಿಕ್ಕೋಡಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾಜಿ ಸೈನಿಕರು ವಾಸಿಸುತ್ತಿದ್ದು, ಅವರಿಗಾಗಿ ಚಿಕ್ಕೋಡಿಯಲ್ಲಿ ಮಿಲಿಟರಿ ಕ್ಯಾಂಟೀನ್‌ ಪ್ರಾರಂಭಿಸಲು ಸೈನಿಕ ಕಲ್ಯಾಣ ಹಾಗೂ ಪುನರ್ವಸತಿ ಇಲಾಖೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ಇಂದಿರಾ ಆವಾಸ್‌ ಯೋಜನೆಯಲ್ಲಿ ಮಾಜಿ ಸೈನಿಕರಿಗೆ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಅದರಂತೆ ಬಸವ ವಸತಿ ಹಾಗೂ ಅಂಬೇಡ್ಕರ್‌ ವಸತಿ ಯೋಜನೆಗಳಲ್ಲೂ ಈ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಸೈನಿಕರಿಗೆ ಬಿಪಿಎಲ್‌ ಪಡಿತರ ಚೀಟಿ ವಿತರಿಸಬೇಕು. ಸೈನಿಕ ಕಲ್ಯಾಣ ಹಾಗೂ ಪುನರ್ವಸತಿ ಇಲಾಖೆಯಿಂದ ನೀಡುವ ಸೇವೆಗಳಿಗೆ ಶುಲ್ಕ ಪಡೆಯುವುದನ್ನು ರದ್ದುಪಡಿಸಬೇಕು. ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮತ್ತು ಪುಸ್ತಕ ಖರೀದಿ ಸಹಾಯಧನವನ್ನು ಹೆಚ್ಚಿಸಬೇಕು ಎಂದು ಮನವಿ ಮೂಲಕ ಸಕರಾರಕ್ಕೆ ಒತ್ತಾಯಿಸಿದರು.

ಸಂಘದ ಮುಖಂಡರಾದ ಬಿ.ಎಂ. ಸಂಗ್ರೋಳ, ರಮೇಶ ಬಸ್ತವಾಡ, ಕುಮಾರ ಹಿರೇಮಠ, ಲಕ್ಷ ್ಮಣ ಖವಾಸಪುರ, ಶಿವಾಜಿ ಚಿಂಗಳೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ