ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಇಲ್ಲ:ಜಿಲ್ಲಾಧಿಕಾರಿ
ಈ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸದೆ ಸಮೀಪದ ದೇವಸ್ಥಾನಗಳು ಹಾಗೂ ಮನೆಗಳಲ್ಲಿ ಪ್ರತಿಷ್ಠಾಪಿಸಿ ಸರಳವಾಗಿ ಗಣೇಶೋತ್ಸವ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.
Vijaya Karnataka Web 13 Aug 2020, 3:38 pm
ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಈ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸದೆ ಸಮೀಪದ ದೇವಸ್ಥಾನಗಳು ಹಾಗೂ ಮನೆಗಳಲ್ಲಿ ಪ್ರತಿಷ್ಠಾಪಿಸಿ ಸರಳವಾಗಿ ಗಣೇಶೋತ್ಸವ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.
ಗಣೇಶ ಪ್ರತಿಷ್ಠಾಪನೆಗೆ ಆಯಾ ಮಂಡಳಿಗಳು ಸಂಬಂಧಪಟ್ಟ ಇಲಾಖೆಗಳಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಮನೆಯಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಯ ಎತ್ತರ ಗರಿಷ್ಠ 2 ಅಡಿ ಹಾಗೂ ದೇವಸ್ಥಾನಗಳಲ್ಲಿ ಗರಿಷ್ಠ 4 ಅಡಿ ಮೀರಬಾರದು. ಪಿಒಪಿ ಬಳಸದೇ ಮಣ್ಣಿನಿಂದ ತಯಾರಿಸಿದ ಮೂರ್ತಿಗಳನ್ನೇ ಕಡ್ಡಾಯವಾಗಿ ಪ್ರತಿಷ್ಠಾಪಿಸಬೇಕು. ಮನೆಯ ಗಣೇಶನನ್ನು ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು ಎಂದು ಅವರು ಸೂಚಿಸಿದ್ದಾರೆ.
ಗಣೇಶೋತ್ಸವ ವೇಳೆ ದೇವಸ್ಥಾನಗಳ ಮಂಡಳಿಗಳು ಯಾವುದೇ ರೀತಿಯ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಕೋವಿಡ್-19 ರೋಗ ಕುರಿತು ಜಾಗೃತಿ ಮೂಡಿಸುವ ಸಾಮಾಜಿಕ, ಆರೋಗ್ಯ ಸಂದೇಶಗಳನ್ನು ಬಿಂಬಿಸುವ ಜಾಹೀರಾತುಗಳಿಗೆ ಪ್ರಾಧಾನ್ಯತೆ ನೀಡಬೇಕು. ಮನರಂಜನಾ ಕಾರ್ಯಕ್ರಮಗಳ ಬದಲಾಗಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆದ್ಯತೆ ನೀಡಬೇಕು. ಆರತಿ ಸಮಯದಲ್ಲಿ ಗರಿಷ್ಠ ಐದು ಜನ ಮಾತ್ರ ಸೇರಬೇಕು ಎಂದು ಅವರು ಸೂಚಿಸಿದ್ದಾರೆ.
ಕೆಜಿ ಹಳ್ಳಿ ಗಲಭೆಕೋರರು ದೇಶದ್ರೋಹಿಗಳು: ಬೆಳಗಾವಿ ಸಂಸದ ಸುರೇಶ್ ಅಂಗಡಿ ಕಿಡಿ!
ಆನ್ಲೈನ್ ದರ್ಶನ!
ಡಾಲ್ಬಿ, ಪಟಾಕಿ, ಬಣ್ಣ ಎರಚದೆ ಸರಳವಾಗಿ ಹಬ್ಬ ಆಚರಿಸಬೇಕು. ಸಾರ್ವಜನಿಕರಿಗೆ ಗಣೇಶ ದರ್ಶನದ ಸೌಲಭ್ಯವನ್ನು ಕೇಬಲ್ ನೆಟ್ವರ್ಕ್, ವೆಬ್ಸೈಟ್, ಫೇಸ್ಬುಕ್ ಇತ್ಯಾದಿಗಳ ಮೂಲಕ ಆನ್ಲೈನ್ನಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನಿಯಮ ಉಲ್ಲಂಘಿಘಿಸಿದರೆ ಕ್ರಮ
ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಜೇಶನ್ ಮಾಡಬೇಕು. ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀೕನಿಂಗ್ ವ್ಯವಸ್ಥೆ ಕಲ್ಪಿಸಬೇಕು. ಭಕ್ತರಿಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರ ಗುರುತಿಸುವುದು, ಮಾಸ್ಕ್ ಧಾರಣೆ ಸೇರಿದಂತೆ ಜಿಲ್ಲಾಡಳಿತದ ಮಾರ್ಗಸೂಚಿಗಳನ್ನು ಸಾರ್ವಜನಿಕರು, ದೇವಸ್ಥಾನಗಳ ಮಂಡಳಿಗಳು ಹಾಗೂ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಪಾಲಿಸಬೇಕು. ಈ ಆದೇಶ ಉಲ್ಲಂಘಿಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಗಣೇಶ ಪ್ರತಿಷ್ಠಾಪನೆಗೆ ಆಯಾ ಮಂಡಳಿಗಳು ಸಂಬಂಧಪಟ್ಟ ಇಲಾಖೆಗಳಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಮನೆಯಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಯ ಎತ್ತರ ಗರಿಷ್ಠ 2 ಅಡಿ ಹಾಗೂ ದೇವಸ್ಥಾನಗಳಲ್ಲಿ ಗರಿಷ್ಠ 4 ಅಡಿ ಮೀರಬಾರದು. ಪಿಒಪಿ ಬಳಸದೇ ಮಣ್ಣಿನಿಂದ ತಯಾರಿಸಿದ ಮೂರ್ತಿಗಳನ್ನೇ ಕಡ್ಡಾಯವಾಗಿ ಪ್ರತಿಷ್ಠಾಪಿಸಬೇಕು. ಮನೆಯ ಗಣೇಶನನ್ನು ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು ಎಂದು ಅವರು ಸೂಚಿಸಿದ್ದಾರೆ.
ಗಣೇಶೋತ್ಸವ ವೇಳೆ ದೇವಸ್ಥಾನಗಳ ಮಂಡಳಿಗಳು ಯಾವುದೇ ರೀತಿಯ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಕೋವಿಡ್-19 ರೋಗ ಕುರಿತು ಜಾಗೃತಿ ಮೂಡಿಸುವ ಸಾಮಾಜಿಕ, ಆರೋಗ್ಯ ಸಂದೇಶಗಳನ್ನು ಬಿಂಬಿಸುವ ಜಾಹೀರಾತುಗಳಿಗೆ ಪ್ರಾಧಾನ್ಯತೆ ನೀಡಬೇಕು. ಮನರಂಜನಾ ಕಾರ್ಯಕ್ರಮಗಳ ಬದಲಾಗಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆದ್ಯತೆ ನೀಡಬೇಕು. ಆರತಿ ಸಮಯದಲ್ಲಿ ಗರಿಷ್ಠ ಐದು ಜನ ಮಾತ್ರ ಸೇರಬೇಕು ಎಂದು ಅವರು ಸೂಚಿಸಿದ್ದಾರೆ.
ಕೆಜಿ ಹಳ್ಳಿ ಗಲಭೆಕೋರರು ದೇಶದ್ರೋಹಿಗಳು: ಬೆಳಗಾವಿ ಸಂಸದ ಸುರೇಶ್ ಅಂಗಡಿ ಕಿಡಿ!
ಆನ್ಲೈನ್ ದರ್ಶನ!
ಡಾಲ್ಬಿ, ಪಟಾಕಿ, ಬಣ್ಣ ಎರಚದೆ ಸರಳವಾಗಿ ಹಬ್ಬ ಆಚರಿಸಬೇಕು. ಸಾರ್ವಜನಿಕರಿಗೆ ಗಣೇಶ ದರ್ಶನದ ಸೌಲಭ್ಯವನ್ನು ಕೇಬಲ್ ನೆಟ್ವರ್ಕ್, ವೆಬ್ಸೈಟ್, ಫೇಸ್ಬುಕ್ ಇತ್ಯಾದಿಗಳ ಮೂಲಕ ಆನ್ಲೈನ್ನಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನಿಯಮ ಉಲ್ಲಂಘಿಘಿಸಿದರೆ ಕ್ರಮ
ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಜೇಶನ್ ಮಾಡಬೇಕು. ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀೕನಿಂಗ್ ವ್ಯವಸ್ಥೆ ಕಲ್ಪಿಸಬೇಕು. ಭಕ್ತರಿಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರ ಗುರುತಿಸುವುದು, ಮಾಸ್ಕ್ ಧಾರಣೆ ಸೇರಿದಂತೆ ಜಿಲ್ಲಾಡಳಿತದ ಮಾರ್ಗಸೂಚಿಗಳನ್ನು ಸಾರ್ವಜನಿಕರು, ದೇವಸ್ಥಾನಗಳ ಮಂಡಳಿಗಳು ಹಾಗೂ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಪಾಲಿಸಬೇಕು. ಈ ಆದೇಶ ಉಲ್ಲಂಘಿಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.