ಬೆಳಗಾವಿ: ರಾಜ್ಯದಲ್ಲಿ ಹೆಲ್ತ್ ಟೂರಿಸಂಗೆ ಪೂರಕವಾಗಿ ನರ್ಸಿಂಗ್ ವಿಶ್ವವಿದ್ಯಾಲಯ ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷ ಣ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇಲ್ಲಿನ ಜೆಎನ್ಎಂಸಿ ಕಾಲೇಜಿನ ಡಾ.ಬಿ.ಎಸ್.ಜೀರಿಗೆ ಸಭಾಂಗಣದಲ್ಲಿ ಕೆಎಲ್ಇ ಸಂಸ್ಥೆ ಶುಕ್ರವಾರ ಆಯೋಜಿಸಿದ್ದ 'ಅಂತಾರಾಷ್ಟ್ರೀಯ ನರ್ಸಿಂಗ್ ಸಮ್ಮೇಳನ' ಉದ್ಘಾಟಿಸಿ ಅವರು ಮಾತನಾಡಿದರು.
''ನರ್ಸಿಂಗ್ ವಿಶ್ವ ವಿದ್ಯಾಲಯ ಸ್ಥಾಪಿಸುವ ನಿಟ್ಟಿನಲ್ಲಿ ಕಾನೂನು ಸಲಹೆ ಮತ್ತು ತಜ್ಞರ ಅಭಿಪ್ರಾಯ ಪಡೆದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಜತೆಗೂ ಸಮಾಲೋಚನೆ ನಡೆಸಿ ವರದಿ ಸಂಗ್ರಹಿಸಲಾಗಿದೆ. ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿಯೇ ಹೊಸ ವಿಶ್ವವಿದ್ಯಾಲಯ ಸ್ಥಾಪನೆಯ ಪ್ರಸ್ತಾವ ಕೂಡ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗುವುದು'', ಎಂದು ತಿಳಿಸಿದರು.
''ಹೊಸ ನರ್ಸಿಂಗ್ ವಿಶ್ವವಿದ್ಯಾಲಯ ಸ್ಥಾಪನೆ ವಿಚಾರ ಪ್ರಸ್ತಾಪಿಸಿದಾಗ ಬಹಳಷ್ಟು ಜನರು ವಿರೋಧಿಸಿದ್ದÜರು. ಆದರೆ, ರೋಗಿಗೆ ವೈದ್ಯರಿಗಿಂತ ಮೊದಲು ನರ್ಸಿಂಗ್ ಸಿಬ್ಬಂದಿಯಿಂದಲೇ ಸಹಾಯ ಸಿಗುತ್ತಿದೆ. ವೈದ್ಯರ ಮೇಲಿನ ಒತ್ತಡ ಕಡಿಮೆ ಮಾಡುವುದು ಮತ್ತು ರೋಗಿಗೆ ತಕ್ಷಣ ಉಪಚಾರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನರ್ಸಿಂಗ್ ಕ್ಷೇತ್ರಕ್ಕೆ ಹೊಸ ಆಯಾಮ ನೀಡಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ ನರ್ಸಿಂಗ್ ವಿವಿ ಸ್ಥಾಪನೆಗೆ ಕೈ ಹಾಕಲಾಗಿದೆ'', ಎಂದರು.
ಸಲಹೆ ನೀಡಿ: ''ಸದ್ಯ ನರ್ಸಿಂಗ್ ಕ್ಷೇತ್ರ ಹಲವಾರು ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸುತ್ತಿದೆ. ಅಂತಾರಾಷ್ಟ್ರೀಯ ನರ್ಸಿಂಗ್ ಸಮ್ಮೇಳನದಲ್ಲಿ ನರ್ಸಿಂಗ್ ಕ್ಷೇತ್ರದ ಜಾಗತಿಕ ಪ್ರತಿನಿಧಿಗಳು ಒಂದು ಕಡೆ ಸೇರಿ ಚರ್ಚೆ ಮಾಡುತ್ತಿರುವದು ಉತ್ತಮ ಬೆಳವಣಿಗೆ. ಈ ಸಮ್ಮೇಳನದಲ್ಲಿ ಕೈಗೊಳ್ಳುವ ತೀರ್ಮಾನ ಮತ್ತು ಸಲಹೆಗಳನ್ನು ಇಲಾಖೆಗೆ ಕಳುಹಿಸಿಕೊಟ್ಟರೆ ಅನುಷ್ಠಾನ ಮಾಡಲು ರಾಜ್ಯ ಸರಕಾರ ಕ್ರಮ ವಹಿಸಲಿದೆ'', ಎಂದು ಸಚಿವ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
ಕೆಎಲ್ಇ ಅಧ್ಯಕ್ಷ ಹಾಗೂ ಮಾಜಿ ಸಚಿವ ಶಿವಾನಂದ ಕೌಜಲಗಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಭಾರತೀಯ ನರ್ಸಿಂಗ್ ಕೌನ್ಸಿಲ್ ಅಧ್ಯಕ್ಷ ಟಿ.ದಿಲೀಪ್ಕುಮಾರ, ಕೆಎಲ್ಇ ಅಕಾಡೆಮಿ ಕುಲಪತಿ ಡಾ.ವಿವೇಕ ಸಾವೋಜಿ, ಕುಲಸಚಿವ ಡಾ.ವಿ.ಡಿ. ಪಾಟೀಲ ಸೇರಿದಂತೆ ವಿವಿಧ ದೇಶಗಳಿಂದ ಆಗಮಿಸಿದ್ದ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯೆ ಡಾ.ಸುಧಾ ರೆಡ್ಡಿ ಸ್ವಾಗತಿಸಿದರು.
ನರ್ಸಿಂಗ್ ವಿವಿ ಬೆಳಗಾವಿಯಲ್ಲಿ ಸ್ಥಾಪನೆಯಾಗಲಿ: ಡಾ. ಕೋರೆ
ಸಮಾರಂಭದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಹಾಗೂ ಕೆಎಲ್ಇ ಸಂಸ್ಥೆಯ ಚೇರ್ಮನ್ ಡಾ.ಪ್ರಭಾಕರ ಕೋರೆ, ರಾಜ್ಯದ ಮೊದಲ ನರ್ಸಿಂಗ್ ವಿವಿ ಬೆಳಗಾವಿಯಲ್ಲೇ ಸ್ಥಾಪನೆಯಾಗಲಿ ಎಂದು ಆಶಿಸಿದರು. ವಿಶ್ವವಿದ್ಯಾಲಯಕ್ಕೆ ಬೇಕಾದ ಜಾಗ ಮತ್ತು ಸೌಲಭ್ಯಗಳನ್ನು ಒದಗಿಸಿಕೊಡಲು ಕೆಎಲ್ಇ ಸಂಸ್ಥೆ ಬದ್ಧವಾಗಿದೆ ಎಂದರು. ''ನರ್ಸಿಂಗ್ ಸೇವೆ ಜಾಗತಿಕ ಮಟ್ಟದಲ್ಲಿ ದೊಡ್ಡ ಉದ್ಯಮವಾಗಿ ಬೆಳೆಯುತ್ತಿದೆ. ಆಸ್ಪತ್ರೆಗೆ ಕಾಲಿಡುವ ಪ್ರತಿ ರೋಗಿಯನ್ನು ವೈದ್ಯರೇ ನೋಡಬೇಕು ಎನ್ನುವ ಮನೋಭಾವನೆ ಬದಲಾಗಬೇಕಿದ್ದರೆ ಅತ್ಯುತ್ತಮ ನರ್ಸಿಂಗ್ ಸೇವೆ ಸಿಗಬೇಕಿದೆ. ನರ್ಸಿಂಗ್ ಸೇವೆ ವೈದ್ಯರ ಮೇಲಿನ ಒತ್ತಡ ಕಡಿಮೆ ಮಾಡಿ ಆರೋಗ್ಯಪೂರ್ಣ ವಾತಾವರಣ ನಿರ್ಮಿಸಲು ಸಹಾಯ ಮಾಡುತ್ತದೆ'', ಎಂದ ಅವರು, ''ಅತ್ಯಂತ ಹಳೆಯದಾದ ನರ್ಸಿಂಗ್ ಶಿಕ್ಷ ಣದ ಪಠ್ಯ ಕೂಡ ಇಂದಿನ ಕಾಲಮಾನಕ್ಕೆ ತಕ್ಕಂತೆ ಬದಲಾಗಬೇಕಿದ್ದು, ಈ ಕುರಿತು ನರ್ಸಿಂಗ್ ಕೌನ್ಸಿಲ್ ಆಫ್ ಇಂಡಿಯಾ ಕ್ರಮ ಕೈಗೊಳ್ಳಬೇಕು'', ಎಂದು ಸಲಹೆ ನೀಡಿದರು.
ಇಲ್ಲಿನ ಜೆಎನ್ಎಂಸಿ ಕಾಲೇಜಿನ ಡಾ.ಬಿ.ಎಸ್.ಜೀರಿಗೆ ಸಭಾಂಗಣದಲ್ಲಿ ಕೆಎಲ್ಇ ಸಂಸ್ಥೆ ಶುಕ್ರವಾರ ಆಯೋಜಿಸಿದ್ದ 'ಅಂತಾರಾಷ್ಟ್ರೀಯ ನರ್ಸಿಂಗ್ ಸಮ್ಮೇಳನ' ಉದ್ಘಾಟಿಸಿ ಅವರು ಮಾತನಾಡಿದರು.
''ನರ್ಸಿಂಗ್ ವಿಶ್ವ ವಿದ್ಯಾಲಯ ಸ್ಥಾಪಿಸುವ ನಿಟ್ಟಿನಲ್ಲಿ ಕಾನೂನು ಸಲಹೆ ಮತ್ತು ತಜ್ಞರ ಅಭಿಪ್ರಾಯ ಪಡೆದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಜತೆಗೂ ಸಮಾಲೋಚನೆ ನಡೆಸಿ ವರದಿ ಸಂಗ್ರಹಿಸಲಾಗಿದೆ. ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿಯೇ ಹೊಸ ವಿಶ್ವವಿದ್ಯಾಲಯ ಸ್ಥಾಪನೆಯ ಪ್ರಸ್ತಾವ ಕೂಡ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗುವುದು'', ಎಂದು ತಿಳಿಸಿದರು.
''ಹೊಸ ನರ್ಸಿಂಗ್ ವಿಶ್ವವಿದ್ಯಾಲಯ ಸ್ಥಾಪನೆ ವಿಚಾರ ಪ್ರಸ್ತಾಪಿಸಿದಾಗ ಬಹಳಷ್ಟು ಜನರು ವಿರೋಧಿಸಿದ್ದÜರು. ಆದರೆ, ರೋಗಿಗೆ ವೈದ್ಯರಿಗಿಂತ ಮೊದಲು ನರ್ಸಿಂಗ್ ಸಿಬ್ಬಂದಿಯಿಂದಲೇ ಸಹಾಯ ಸಿಗುತ್ತಿದೆ. ವೈದ್ಯರ ಮೇಲಿನ ಒತ್ತಡ ಕಡಿಮೆ ಮಾಡುವುದು ಮತ್ತು ರೋಗಿಗೆ ತಕ್ಷಣ ಉಪಚಾರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನರ್ಸಿಂಗ್ ಕ್ಷೇತ್ರಕ್ಕೆ ಹೊಸ ಆಯಾಮ ನೀಡಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ ನರ್ಸಿಂಗ್ ವಿವಿ ಸ್ಥಾಪನೆಗೆ ಕೈ ಹಾಕಲಾಗಿದೆ'', ಎಂದರು.
ಸಲಹೆ ನೀಡಿ: ''ಸದ್ಯ ನರ್ಸಿಂಗ್ ಕ್ಷೇತ್ರ ಹಲವಾರು ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸುತ್ತಿದೆ. ಅಂತಾರಾಷ್ಟ್ರೀಯ ನರ್ಸಿಂಗ್ ಸಮ್ಮೇಳನದಲ್ಲಿ ನರ್ಸಿಂಗ್ ಕ್ಷೇತ್ರದ ಜಾಗತಿಕ ಪ್ರತಿನಿಧಿಗಳು ಒಂದು ಕಡೆ ಸೇರಿ ಚರ್ಚೆ ಮಾಡುತ್ತಿರುವದು ಉತ್ತಮ ಬೆಳವಣಿಗೆ. ಈ ಸಮ್ಮೇಳನದಲ್ಲಿ ಕೈಗೊಳ್ಳುವ ತೀರ್ಮಾನ ಮತ್ತು ಸಲಹೆಗಳನ್ನು ಇಲಾಖೆಗೆ ಕಳುಹಿಸಿಕೊಟ್ಟರೆ ಅನುಷ್ಠಾನ ಮಾಡಲು ರಾಜ್ಯ ಸರಕಾರ ಕ್ರಮ ವಹಿಸಲಿದೆ'', ಎಂದು ಸಚಿವ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
ಕೆಎಲ್ಇ ಅಧ್ಯಕ್ಷ ಹಾಗೂ ಮಾಜಿ ಸಚಿವ ಶಿವಾನಂದ ಕೌಜಲಗಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಭಾರತೀಯ ನರ್ಸಿಂಗ್ ಕೌನ್ಸಿಲ್ ಅಧ್ಯಕ್ಷ ಟಿ.ದಿಲೀಪ್ಕುಮಾರ, ಕೆಎಲ್ಇ ಅಕಾಡೆಮಿ ಕುಲಪತಿ ಡಾ.ವಿವೇಕ ಸಾವೋಜಿ, ಕುಲಸಚಿವ ಡಾ.ವಿ.ಡಿ. ಪಾಟೀಲ ಸೇರಿದಂತೆ ವಿವಿಧ ದೇಶಗಳಿಂದ ಆಗಮಿಸಿದ್ದ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯೆ ಡಾ.ಸುಧಾ ರೆಡ್ಡಿ ಸ್ವಾಗತಿಸಿದರು.
ನರ್ಸಿಂಗ್ ವಿವಿ ಬೆಳಗಾವಿಯಲ್ಲಿ ಸ್ಥಾಪನೆಯಾಗಲಿ: ಡಾ. ಕೋರೆ
ಸಮಾರಂಭದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಹಾಗೂ ಕೆಎಲ್ಇ ಸಂಸ್ಥೆಯ ಚೇರ್ಮನ್ ಡಾ.ಪ್ರಭಾಕರ ಕೋರೆ, ರಾಜ್ಯದ ಮೊದಲ ನರ್ಸಿಂಗ್ ವಿವಿ ಬೆಳಗಾವಿಯಲ್ಲೇ ಸ್ಥಾಪನೆಯಾಗಲಿ ಎಂದು ಆಶಿಸಿದರು. ವಿಶ್ವವಿದ್ಯಾಲಯಕ್ಕೆ ಬೇಕಾದ ಜಾಗ ಮತ್ತು ಸೌಲಭ್ಯಗಳನ್ನು ಒದಗಿಸಿಕೊಡಲು ಕೆಎಲ್ಇ ಸಂಸ್ಥೆ ಬದ್ಧವಾಗಿದೆ ಎಂದರು. ''ನರ್ಸಿಂಗ್ ಸೇವೆ ಜಾಗತಿಕ ಮಟ್ಟದಲ್ಲಿ ದೊಡ್ಡ ಉದ್ಯಮವಾಗಿ ಬೆಳೆಯುತ್ತಿದೆ. ಆಸ್ಪತ್ರೆಗೆ ಕಾಲಿಡುವ ಪ್ರತಿ ರೋಗಿಯನ್ನು ವೈದ್ಯರೇ ನೋಡಬೇಕು ಎನ್ನುವ ಮನೋಭಾವನೆ ಬದಲಾಗಬೇಕಿದ್ದರೆ ಅತ್ಯುತ್ತಮ ನರ್ಸಿಂಗ್ ಸೇವೆ ಸಿಗಬೇಕಿದೆ. ನರ್ಸಿಂಗ್ ಸೇವೆ ವೈದ್ಯರ ಮೇಲಿನ ಒತ್ತಡ ಕಡಿಮೆ ಮಾಡಿ ಆರೋಗ್ಯಪೂರ್ಣ ವಾತಾವರಣ ನಿರ್ಮಿಸಲು ಸಹಾಯ ಮಾಡುತ್ತದೆ'', ಎಂದ ಅವರು, ''ಅತ್ಯಂತ ಹಳೆಯದಾದ ನರ್ಸಿಂಗ್ ಶಿಕ್ಷ ಣದ ಪಠ್ಯ ಕೂಡ ಇಂದಿನ ಕಾಲಮಾನಕ್ಕೆ ತಕ್ಕಂತೆ ಬದಲಾಗಬೇಕಿದ್ದು, ಈ ಕುರಿತು ನರ್ಸಿಂಗ್ ಕೌನ್ಸಿಲ್ ಆಫ್ ಇಂಡಿಯಾ ಕ್ರಮ ಕೈಗೊಳ್ಳಬೇಕು'', ಎಂದು ಸಲಹೆ ನೀಡಿದರು.