ಆ್ಯಪ್ನಗರ

ರಾಹುಲ್‌ ಶವ ಪತ್ತೆ; ಓರ್ವನ ವಿಚಾರಣೆ

ತಿಲಾರಿ ಘಾಟ್‌ನ ಅರಣ್ಯ ಪ್ರದೇಶದಲ್ಲಿ ಕಾಣೆಯಾಗಿದ್ದ ಯುವಕನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ...

Vijaya Karnataka 5 Sep 2018, 5:00 am
ಬೆಳಗಾವಿ: ತಿಲಾರಿ ಘಾಟ್‌ನ ಅರಣ್ಯ ಪ್ರದೇಶದಲ್ಲಿ ಕಾಣೆಯಾಗಿದ್ದ ಯುವಕನ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
Vijaya Karnataka Web rahuls body detected ones inquiry
ರಾಹುಲ್‌ ಶವ ಪತ್ತೆ; ಓರ್ವನ ವಿಚಾರಣೆ


ಆದರ್ಶ ನಗರದ ಮಹಾಲಕ್ಷ್ಮಿ ಕಾಲನಿಯ ರಾಮ ಕೃಷ್ಣ ಛೋಟೆವಾಲೆ(37) ಬಂಧಿತ ವ್ಯಕ್ತಿ. ವಡಗಾವಿಯ ರಾಹುಲ ಶರಣಪ್ಪ ದಿವಟಗಿ (27) ಎಂಬಾತ ಆ.10 ನಾಪತ್ತೆಯಾಗಿದ್ದ. ಆ.15 ರಂದು ತಂದೆ ಶರಣಪ್ಪ ದಿವಟಗಿ ಟಿಳವಾಡಿ ಪೊಲೀಸ್‌ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ರಾಹುಲ ಹತ್ಯೆ ವಿಷಯವಾಗಿ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. ಈ ಪ್ರಕರಣದ ಕುರಿತು ವಿಚಾರಣೆ ನಡೆಯುತ್ತಿದ್ದು, ಪ್ರಕರಣದಲ್ಲಿ ಭಾಗಿಯಾದವರ ಪತ್ತೆ ಕಾರ್ಯ ನಡೆದಿದೆ ಎಂದು ಟಿಳಕವಾಡಿ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ