ಆ್ಯಪ್ನಗರ

ಹಾಲಿನ ಡೇರಿ ಮೇಲೆ ದಾಳಿ

ಬೆಳಗಾವಿ: ಹಾಲಿಗೆ ರಾಸಾಯನಿಕ ಬೆರೆಸಿ ಕಲಬೆರಕೆ ಮಾಡುತ್ತಿದ್ದ ರಾಯಬಾಗ ...

Vijaya Karnataka 28 Jun 2019, 5:00 am
ಬೆಳಗಾವಿ : ಹಾಲಿಗೆ ರಾಸಾಯನಿಕ ಬೆರೆಸಿ ಕಲಬೆರಕೆ ಮಾಡುತ್ತಿದ್ದ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಘಟಕದ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಪೊಲೀಸರೊಂದಿಗೆ ದಾಳಿ ನಡೆಸಿ ಭಾರಿ ಪ್ರಮಾಣದ ಕಲಬೆರಕೆ ಹಾಲು ಮತ್ತು ಕಲಬೆರಕೆಗೆ ಬಳಸುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
Vijaya Karnataka Web BLG-2706-2-52-27CHINCHALI 1


ಚಿಂಚಲಿ ಪಟ್ಟಣದ ರೈಲು ನಿಲ್ದಾಣ ರಸ್ತೆಯಲ್ಲಿನ ಹಾಲಿನ ಡೇರಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ, ಹಾಲಿನ ಪ್ಯಾಟ್‌ ಹೆಚ್ಚಿಸುವ ಉದ್ದೇಶದಿಂದ ಹಾಲಿಗೆ ಬಳಸುತ್ತಿದ್ದ ರಾಸಾಯನಿಕ ವಸ್ತುಗಳನ್ನು ಜಪ್ತಿ ಮಾಡಿದೆ. ಕಲಬೆರಕೆ ಮಾಡಿದ ಅಪಾರ ಪ್ರಮಾಣದ ಹಾಲು, 35 ಲೀಟರ್‌ ಸಾಮರ್ಥ್ಯ‌ದ 25 ಕ್ಯಾನ್‌, ಹಾಲಿನ ಪೌಡರ್‌ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡಿರುವ ಹಾಲು ಮತ್ತು ರಾಸಾಯನಿಕ ವಸ್ತುಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸಂರಕ್ಷಣಾಧಿಕಾರಿ ಗಣಪತಿ ಕಡೆಬಾಗಿಲ ತಿಳಿಸಿದ್ದಾರೆ. ಈ ಕುರಿತು ಕುಡಚಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ