ಆ್ಯಪ್ನಗರ

ಖಾನಾಪುರದಲ್ಲಿ ತಗ್ಗಿದ ಮಳೆಯ ಅಬ್ಬರ

ಖಾನಾಪುರ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಸತತವಾಗಿ ಸುರಿದ ಮಹಾಮಳೆ ಬುಧವಾರ ಶಾಂತವಾಗಿದೆ. ಆದರೆ, ತಾಲೂಕಿನಲ್ಲಿ ಹುಟ್ಟಿ ಹರಿಯುವ ಮಲಪ್ರಭಾ, ಮಹದಾಯಿ, ಪಾಂಡರಿ ನದಿಗಳು ಮತ್ತು ಅಲಾತ್ರಿ, ಕಳಸಾ, ಬಂಡೂರಿ, ಮಂಗೇತ್ರಿ, ವಜ್ರಾ, ಪಣಸೂರಿ, ಕುಂಬಾರ, ತಟ್ಟಿ, ಕೋಟ್ನಿ ಮತ್ತಿತರ ಹಳ್ಳಗಳು ಇನ್ನೂ ತುಂಬಿ ಹರಿಯುತ್ತಿವೆ.

Vijaya Karnataka 1 Aug 2019, 5:00 am
ಖಾನಾಪುರ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಸತತವಾಗಿ ಸುರಿದ ಮಹಾಮಳೆ ಬುಧವಾರ ಶಾಂತವಾಗಿದೆ. ಆದರೆ, ತಾಲೂಕಿನಲ್ಲಿ ಹುಟ್ಟಿ ಹರಿಯುವ ಮಲಪ್ರಭಾ, ಮಹದಾಯಿ, ಪಾಂಡರಿ ನದಿಗಳು ಮತ್ತು ಅಲಾತ್ರಿ, ಕಳಸಾ, ಬಂಡೂರಿ, ಮಂಗೇತ್ರಿ, ವಜ್ರಾ, ಪಣಸೂರಿ, ಕುಂಬಾರ, ತಟ್ಟಿ, ಕೋಟ್ನಿ ಮತ್ತಿತರ ಹಳ್ಳಗಳು ಇನ್ನೂ ತುಂಬಿ ಹರಿಯುತ್ತಿವೆ.
Vijaya Karnataka Web BEL-31KHANAPUR1


ಬುಧವಾರದ ವರೆಗೆ ಸುರಿದ ಮಳೆಗೆ ತಾಲೂಕಿನ ವಿವಿಧೆಡೆ ಒಟ್ಟು 13 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಕಣಕುಂಬಿ, ಜಾಂಬೋಟಿ, ಹೆಮ್ಮಡಗಾ, ಶಿರೋಲಿ, ನೇರಸಾ, ಗುಂಜಿ ಭಾಗದಲ್ಲಿ ಬುಧವಾರ ಉತ್ತಮ ಮಳೆ ಸುರಿದಿದೆ. ಉಳಿದೆಡೆ ಜಿಟಿಜಿಟಿ ಮಳೆ ಮುಂದುವರಿದಿದೆ.

ಮಂಗಳವಾರದ ಮಳೆಗೆ ತಾಲೂಕಿನ ನಂದಗಡ, ಚಾಪಗಾಂವ, ಕೊಡಚವಾಡ, ಪಾರಿಶ್ವಾಡ, ದೇವಲತ್ತಿ ಮತ್ತು ಗರ್ಲಗುಂಜಿ ಭಾಗದ ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ಮಂಗಳವಾರ ಕುಂಬಾರ ಹಳ್ಳದ ಪ್ರವಾಹದಿಂದಾಗಿ ಜಲಾವೃತಗೊಂಡಿದ್ದ ಪಟ್ಟಣದ ಪೊಲೀಸ್‌ ತರಬೇತಿ ಶಾಲೆಯ ಸಿಬ್ಬಂದಿ ವಸತಿಗೃಹ ಬುಧವಾರ ನೀರಿನಿಂದ ಮುಕ್ತವಾಗಿದೆ.

ನೀಲಾವಡೆ ಗ್ರಾಮದ ಬಳಿ ಮಲಪ್ರಭಾ ನದಿಯ ಸೇತುವೆ, ಇದ್ದಲಹೊಂಡ-ಗರ್ಲಗುಂಜಿ ಮಾರ್ಗದ ಸೇತುವೆ, ಹಿರೇಮುನವಳ್ಳಿ-ಅವರೊಳ್ಳಿ ಮಾರ್ಗಗಳ ಸೇತುವೆ, ಮೋದೆಕೊಪ್ಪ-ತೀರ್ಥಕುಂಡೆ ಮಾರ್ಗದ ಸೇತುವೆಗಳ ಮೇಲೆ ಇನ್ನೂ ನೀರು ಹರಿಯುತ್ತಿದೆ. ಹಬ್ಬನಹಟ್ಟಿಯ ಆಂಜನೇಯ ದೇವಸ್ಥಾನ ಮತ್ತು ಇಟಗಿಯ ಮರುಳಶಂಕರ ದೇವಸ್ಥಾನಗಳು ಬುಧವಾರವೂ ಮಲಪ್ರಭಾ ನದಿಯಲ್ಲಿ ಸಂಪೂರ್ಣ ಮುಳುಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ