ಆ್ಯಪ್ನಗರ

ರಾಮನವಮಿ; ನಾಳೆಯಿಂದ ಶೋಭಾಯಾತ್ರೆ

ಬೆಳಗಾವಿ: ರಾಮನವಮಿ ಅಂಗವಾಗಿ ಶ್ರೀರಾಮ ಸೇನಾ ಹಿಂದೂಸ್ತಾನ ಸಂಘಟನೆ ವತಿಯಿಂದ ನಗರದಲ್ಲಿ ಏ...

Vijaya Karnataka 12 Apr 2019, 5:00 am
ಬೆಳಗಾವಿ : ರಾಮನವಮಿ ಅಂಗವಾಗಿ ಶ್ರೀರಾಮ ಸೇನಾ ಹಿಂದೂಸ್ತಾನ ಸಂಘಟನೆ ವತಿಯಿಂದ ನಗರದಲ್ಲಿ ಏ.13 ರಂದು ಸಂಜೆ 5 ಗಂಟೆಗೆ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ಅಧ್ಯಕ್ಷ ರಮಾಕಾಂತ ಕೊಂಡೂಸ್ಕರ್‌ ತಿಳಿಸಿದರು.
Vijaya Karnataka Web BEL-11 LBS 11


ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಭಾಯಾತ್ರೆ ನಗರದ ಡಾ. ಅಂಬೇಡ್ಕರ್‌ ಉದ್ಯಾನವನದಿಂದ ಆರಂಭವಾಗಿ ಚನ್ನಮ್ಮ ವೃತ್ತ, ಕಾಲೇಜು ರಸ್ತೆ, ಸಂಭಾಜಿ ಚೌಕ್‌ ಮೂಲಕ ಟಿಳಕ ಚೌಕ್‌ದವರೆಗೆ ಜರುಗಲಿದೆ. ಈ ಯಾತ್ರೆಗೆ ಆರ್‌ಆರ್‌ಎಸ್‌ನ ಸಂಘಟನಾ ಕಾರ್ಯದರ್ಶಿ ಎಂ.ಡಿ. ಚುನಮುರಿ ಭಾಗವಹಿಸುವರು ಎಂದರು.

ಶ್ರೀರಾಮ ಸೇನಾ ಹಿಂದೂಸ್ತಾನ ಸಂಘಟನೆಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ರಾಜು ಜಾಧವ, ಗ್ರಾಮೀಣ ಅಧ್ಯಕ್ಷರಾಗಿ ಭರತ ಪಾಟೀಲ, ಹುಕ್ಕೇರಿ ತಾಲೂಕು ಅಧ್ಯಕ್ಷರಾಗಿ ಶ್ಯಾಮ ಯಾದವ, ಖಾನಾಪುರ ಅಧ್ಯಕ್ಷರಾಗಿ ಪಂಡಿತ ಓಗಲೆ, ಗೋಕಾಕ ಅಧ್ಯಕ್ಷರಾಗಿ ಸುನೀಲ ಎಂ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಯಾತ್ರಾ ಕಮಿಟಿ ಅಧ್ಯಕ್ಷ ರಮೇಶ ಪಿ., ಶ್ರೀಕಾಂತ ದೇಸಾಯಿ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ