ಆ್ಯಪ್ನಗರ

ರಮೇಶ್‌ ಜಾರಕಿಹೊಳಿ ಬಿಜೆಪಿಗೆ ಬಂದೇ ಬರ್ತಾರೆ: ಸಂಸದ ಅಂಗಡಿ

''ಶಾಸಕ ರಮೇಶ್‌ ಜಾರಕಿಹೊಳಿ ಬಿಜೆಪಿಗೆ ಬಂದೇ ಬರುತ್ತಾರೆ ಅವರೊಟ್ಟಿಗೆ ಇನ್ನೂ ಕೆಲ ಶಾಸಕರೂ ಬರುತ್ತಾರೆ'', ಎಂದು ಸಂಸದ ಸುರೇಶ ಅಂಗಡಿ ಹೇಳಿದ್ದಾರೆ...

Vijaya Karnataka 25 May 2019, 5:00 am
ಬೆಳಗಾವಿ: ''ಶಾಸಕ ರಮೇಶ್‌ ಜಾರಕಿಹೊಳಿ ಬಿಜೆಪಿಗೆ ಬಂದೇ ಬರುತ್ತಾರೆ. ಅವರೊಟ್ಟಿಗೆ ಇನ್ನೂ ಕೆಲ ಶಾಸಕರೂ ಬರುತ್ತಾರೆ'', ಎಂದು ಸಂಸದ ಸುರೇಶ ಅಂಗಡಿ ಹೇಳಿದ್ದಾರೆ.
Vijaya Karnataka Web ramesh jarakiholi will come to bjp mp angadi
ರಮೇಶ್‌ ಜಾರಕಿಹೊಳಿ ಬಿಜೆಪಿಗೆ ಬಂದೇ ಬರ್ತಾರೆ: ಸಂಸದ ಅಂಗಡಿ


ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮುಂದಿನ ದಿನಗಳಲ್ಲಿ ರಮೇಶ್‌ ಜಾರಕಿಹೊಳಿ ಅವರಿಗೆ ಒಳ್ಳೆಯದಾಗಲಿದೆ'', ಎಂದರು. ''ಕಾಂಗ್ರೆಸ್‌ ಶಾಸಕರಿಗೆ ಈಗ ಅತ್ಮಾವಲೋಕನ ಮಾಡಿಕೊಳ್ಳುವ ಕಾಲ ಬಂದಿದೆ. ಕಾಂಗ್ರೆಸ್‌ನಲ್ಲಿ ಭವಿಷ್ಯ ಇದೆಯಾ ಎನ್ನುವ ಕುರಿತು ಯೋಚಿಸಬೇಕಿದೆ. ಈಗಾಗಲೇ ಅನೇಕ ಶಾಸಕರು ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ನಾಯಕರ ಸಂಪರ್ಕದಲ್ಲಿದ್ದಾರೆ. ಹಾಗಾಗಿ ರಾಜ್ಯ ರಾಜಕಾರಣದಲ್ಲಿ ನೂರಕ್ಕೆ ನೂರರಷ್ಟು ಬದಲಾವಣೆ ಖಚಿತ'', ಎಂದು ಹೇಳಿದರು.

''ಗೋಕಾಕ ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿಗೆ ಲೀಡ್‌ ಸಿಕ್ಕಿದೆ. ಅದಕ್ಕಾಗಿ ಶಾಸಕ ರಮೇಶ್‌ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸುವೆ. ರಾಜಕೀಯವಾಗಿ ಮಾತ್ರ ನಾವು ವೈರಿಗಳೇ ಹೊರತು ವೈಯಕ್ತಿಕವಾಗಿ ಸ್ನೇಹಿತರು'', ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ