ಆ್ಯಪ್ನಗರ

ನಮ್ಮಂಥ ನಿಷ್ಠಾವಂತರನ್ನು ಕಡೆಗಣಿಸಿದ ಕಾಂಗ್ರೆಸ್‌ಗೆ ಉಳಿಗಾಲವಿಲ್ಲ: ರಮೇಶ್‌ ಜಾರಕಿಹೊಳಿ

‘‘ಕಾಂಗ್ರೆಸ್‌ ಪಕ್ಷ ಏಕೆ ಬಿಟ್ಟೆ ಎಂದು ಈವರೆಗೆ ಯಾರೂ ನನ್ನನ್ನು ಕೇಳಿಲ್ಲ. ನನಗೆ ಕಾಂಗ್ರೆಸ್‌ ನಾಯಕರುಗಳ ವಿರುದ್ಧ ಅಸಮಾಧಾನವಿತ್ತು. ಇದನ್ನು ವರಿಷ್ಠರ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಲಿಲ್ಲ’’, - ರಮೇಶ್‌ ಜಾರಕಿಹೊಳಿ.

Vijaya Karnataka 28 Nov 2019, 8:49 pm
ಘಟಪ್ರಭಾ (ಬೆಳಗಾವಿ): ‘‘ನಮ್ಮಂತಹ ನಿಷ್ಠಾವಂತರನ್ನು ಕಡೆಗಣಿಸಿದ್ದರಿಂದ ಕಾಂಗ್ರೆಸ್‌ ಪಕ್ಷ ಕ್ಕೆ ಉಳಿಗಾಲವಿಲ್ಲ’’, ಎಂದು ಅನರ್ಹ ಶಾಸಕ ರಮೇಶ್‌ ಜಾರಕಿಹೊಳಿ ಕಿಡಿಕಾರಿದರು
Vijaya Karnataka Web Ramesh Jarkiholi


ಶಿಂಧಿಕುರಬೇಟ ಗ್ರಾಮದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ‘‘ಕಾಂಗ್ರೆಸ್‌ ಪಕ್ಷ ಏಕೆ ಬಿಟ್ಟೆ ಎಂದು ಈವರೆಗೆ ಯಾರೂ ನನ್ನನ್ನು ಕೇಳಿಲ್ಲ. ನನಗೆ ಕಾಂಗ್ರೆಸ್‌ ನಾಯಕರುಗಳ ವಿರುದ್ಧ ಅಸಮಾಧಾನವಿತ್ತು. ಇದನ್ನು ವರಿಷ್ಠರ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಲಿಲ್ಲ’’, ಎಂದು ಗೋಕಾಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ರಮೇಶ್‌ ಜಾರಕಿಹೊಳಿ ಹೇಳಿದರು.

‘‘ಆರೇಳು ತಿಂಗಳುಗಳಿಂದ ನಡೆಯುತ್ತಿದ್ದ ರಾಜಕೀಯ ವಿದ್ಯಮಾನಗಳನ್ನು ಜನರು ಗಮನಿಸಿದ್ದಾರೆ. ನನಗಿಂತ ಮೊದಲೇ ನಮ್ಮ ಕಾರ್ಯಕರ್ತರು ಬಿಜೆಪಿಯೊಂದಿಗೆ ಮಾನಸಿಕವಾಗಿ ಗುರುತಿಸಿಕೊಂಡಿದ್ದರು. ಹೀಗಾಗಿ ನನಗಿಂತ ಹೆಚ್ಚು ಕ್ರಿಯಾಶೀಲರಾಗಿ ಅವರು ಕೆಲಸ ಮಾಡುತ್ತಿದ್ದಾರೆ. ನನ್ನ ನಿರ್ಧಾರಕ್ಕೆ ಅವರು ಬದ್ಧರಾಗಿದ್ದಾರೆ’’, ಎಂದು ತಿಳಿಸಿದರು.

ಯಾರ ವಿರುದ್ಧವೂ ಮಾತನಾಡದಂತೆ ಕೇಂದ್ರ ಸಚಿವ ಸುರೇಶ್‌ ಅಂಗಡಿ ಹಾಗೂ ಸಹೋದರ ಬಾಲಚಂದ್ರ ಜಾರಕಿಹೊಳಿ ಸಲಹೆ ಮಾಡಿದ್ದಾರೆ. ಹೀಗಾಗಿ, ಯಾರು ಎಷ್ಟೇ ಟೀಕಿಸಿದರೂ ನಾನು ಉತ್ತರಿಸಲ್ಲ. ಚುನಾವಣೆ ಮುಗಿದ ಬಳಿಕ ಮಾತನಾಡುವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ